<p><strong>ಕೋಲಾರ: </strong>ಕೋವಿಡ್–19 ಭೀತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಭಾನುವಾರ (ಮಾರ್ಚ್ 22) ಜಿಲ್ಲೆಯಲ್ಲಿ ‘ಜನತಾ ಕರ್ಪ್ಯೂ’ ಆಚರಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಜನತಾ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9ರವರೆಗೆ ಜಿಲ್ಲೆಯಾದ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು. ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶನಿವಾರ (ಮಾರ್ಚ್ 21) ಸಂಜೆ 4 ಗಂಟೆಯಿಂದ ಭಾನುವಾರ (ಮಾರ್ಚ್ 22) ರಾತ್ರಿ 9 ಗಂಟೆವರೆಗೆ ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ರೈತರು, ಮಂಡಿ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.</p>.<p><strong>ಡಿ.ಎಲ್ ಸ್ಥಗಿತ:</strong> ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜನದಟ್ಟಣೆ ನಿರ್ಬಂಧಿಸಲು ಚಾಲನಾ ಪರವಾನಗಿ ವಿತರಣೆ ಮತ್ತು ವಾಹನ ಚಾಲನೆ ಕಲಿಕೆ ಪರೀಕ್ಷೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಏಪ್ರಿಲ್ 15ರವರೆಗೆ ವಾಹನ ಚಾಲನೆ ಕಲಿಕೆ (ಎಲ್.ಎಲ್) ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಉಳಿದಂತೆ ಮುಂದಿನ ಆದೇಶದವರೆಗೆ ಡಿ.ಎಲ್ ವಿತರಣೆ ಮಾಡುವುದಿಲ್ಲ ಮತ್ತು ವಾಹನ ಚಾಲನೆ ಕಲಿಕೆ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.</p>.<p><strong>ಅಧಿಕಾರಿಗಳ ದಾಳಿ: </strong>ನಗರದಲ್ಲಿ ನಿಯಮಬಾಹಿರವಾಗಿ ದುಪ್ಪಟ್ಟು ಬೆಲೆಗೆ ಮುಖಗವಸು ಮಾರುತ್ತಿದ್ದ ಔಷಧ ಮಳಿಗೆಗಳು ಹಾಗೂ ಅಂಗಡಿಗಳ ಮೇಲೆ ಆಹಾರ ನಿರೀಕ್ಷಕರು, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ಹಾಗೂ ಔಷದ ನಿಯಂತ್ರಣಾಧಿಕಾರಿಗಳ ತಂಡವು ಶುಕ್ರವಾರ ಸಂಜೆ ದಾಳಿ ನಡೆಸಿ ದಂಡ ವಿಧಿಸಿತು.</p>.<p>ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮುಖಗವಸು ಬಳಸುವವರ ಸಂಖ್ಯೆ ಹೆಚ್ಚಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಔಷಧ ಮಾರಾಟ ಮಳಿಗೆಗಳ ಮಾಲೀಕರು ನಗರದಲ್ಲಿ ಹೆಚ್ಚಿನ ಬೆಲೆಗೆ ಮುಖಗವಸು ಮಾರಾಟ ಮಾಡಿ ಗ್ರಾಹಕರನ್ನು ಶೋಷಿಸುತ್ತಿದ್ದರು. ಈ ಸಂಬಂಧ ಸಾರ್ವಜನಿಕರು ನೀಡಿದ ದೂರು ಆಧರಿಸಿ ಅಧಿಕಾರಿಗಳು ಔಷಧ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದರು.</p>.<p>ಕನಕನಪಾಳ್ಯದ ಓಂಕಾರ್ ಮೆಡಿಕಲ್ಸ್, ಎಂ.ಜಿ ರಸ್ತೆಯ ಚಂಪಕ್ ಮೆಡಿಕಲ್ಸ್ ಹೆಚ್ಚಿನ ಬೆಲೆಗೆ ಮುಖಗವಸು ಮಾರುತ್ತಿದ್ದರು. ಈ ಮಳಿಗೆಗಳ ಮಾಲೀಕರಿಗೆ ಅಧಿಕಾರಿಗಳು ತಲಾ ₹ 500 ದಂಡ ವಿಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕೋವಿಡ್–19 ಭೀತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಭಾನುವಾರ (ಮಾರ್ಚ್ 22) ಜಿಲ್ಲೆಯಲ್ಲಿ ‘ಜನತಾ ಕರ್ಪ್ಯೂ’ ಆಚರಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಜನತಾ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9ರವರೆಗೆ ಜಿಲ್ಲೆಯಾದ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು. ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಶನಿವಾರ (ಮಾರ್ಚ್ 21) ಸಂಜೆ 4 ಗಂಟೆಯಿಂದ ಭಾನುವಾರ (ಮಾರ್ಚ್ 22) ರಾತ್ರಿ 9 ಗಂಟೆವರೆಗೆ ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ರೈತರು, ಮಂಡಿ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.</p>.<p><strong>ಡಿ.ಎಲ್ ಸ್ಥಗಿತ:</strong> ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜನದಟ್ಟಣೆ ನಿರ್ಬಂಧಿಸಲು ಚಾಲನಾ ಪರವಾನಗಿ ವಿತರಣೆ ಮತ್ತು ವಾಹನ ಚಾಲನೆ ಕಲಿಕೆ ಪರೀಕ್ಷೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ಟಿಒ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಏಪ್ರಿಲ್ 15ರವರೆಗೆ ವಾಹನ ಚಾಲನೆ ಕಲಿಕೆ (ಎಲ್.ಎಲ್) ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಉಳಿದಂತೆ ಮುಂದಿನ ಆದೇಶದವರೆಗೆ ಡಿ.ಎಲ್ ವಿತರಣೆ ಮಾಡುವುದಿಲ್ಲ ಮತ್ತು ವಾಹನ ಚಾಲನೆ ಕಲಿಕೆ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.</p>.<p><strong>ಅಧಿಕಾರಿಗಳ ದಾಳಿ: </strong>ನಗರದಲ್ಲಿ ನಿಯಮಬಾಹಿರವಾಗಿ ದುಪ್ಪಟ್ಟು ಬೆಲೆಗೆ ಮುಖಗವಸು ಮಾರುತ್ತಿದ್ದ ಔಷಧ ಮಳಿಗೆಗಳು ಹಾಗೂ ಅಂಗಡಿಗಳ ಮೇಲೆ ಆಹಾರ ನಿರೀಕ್ಷಕರು, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ಹಾಗೂ ಔಷದ ನಿಯಂತ್ರಣಾಧಿಕಾರಿಗಳ ತಂಡವು ಶುಕ್ರವಾರ ಸಂಜೆ ದಾಳಿ ನಡೆಸಿ ದಂಡ ವಿಧಿಸಿತು.</p>.<p>ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮುಖಗವಸು ಬಳಸುವವರ ಸಂಖ್ಯೆ ಹೆಚ್ಚಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಔಷಧ ಮಾರಾಟ ಮಳಿಗೆಗಳ ಮಾಲೀಕರು ನಗರದಲ್ಲಿ ಹೆಚ್ಚಿನ ಬೆಲೆಗೆ ಮುಖಗವಸು ಮಾರಾಟ ಮಾಡಿ ಗ್ರಾಹಕರನ್ನು ಶೋಷಿಸುತ್ತಿದ್ದರು. ಈ ಸಂಬಂಧ ಸಾರ್ವಜನಿಕರು ನೀಡಿದ ದೂರು ಆಧರಿಸಿ ಅಧಿಕಾರಿಗಳು ಔಷಧ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದರು.</p>.<p>ಕನಕನಪಾಳ್ಯದ ಓಂಕಾರ್ ಮೆಡಿಕಲ್ಸ್, ಎಂ.ಜಿ ರಸ್ತೆಯ ಚಂಪಕ್ ಮೆಡಿಕಲ್ಸ್ ಹೆಚ್ಚಿನ ಬೆಲೆಗೆ ಮುಖಗವಸು ಮಾರುತ್ತಿದ್ದರು. ಈ ಮಳಿಗೆಗಳ ಮಾಲೀಕರಿಗೆ ಅಧಿಕಾರಿಗಳು ತಲಾ ₹ 500 ದಂಡ ವಿಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>