‘ರಾಜ್ಯದಲ್ಲಿ ನೆರೆ ಹಾವಳಿಯಿದ್ದು, ಬಿಜೆಪಿಯ ಎಲ್ಲಾ ಶಾಸಕರು ನೆರೆ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಆದರೆ, ವಿಪಕ್ಷಗಳ ನಾಯಕರು ರಾಜಕೀಯ ದುರುದ್ದೇಶಕ್ಕೆ ಬಿಜೆಪಿ ಹಾಗೂ ಮುಖ್ಯಮಂತ್ರಿಯವರ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ. ನೆರೆ ಹಾವಳಿ ಇರುವುದರಿಂದ ಸಚಿವ ಸಂಪುಟ ರಚನೆ ಸಾಧ್ಯವಾಗಿಲ್ಲ. ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಸದ್ಯದಲ್ಲೇ ಪರಿಹಾರ ಬಿಡುಗಡೆಯಾಗುತ್ತದೆ’ ಎಂದು ಹೇಳಿದರು.