ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಾ. ಪಿ.ವಿ. ನಾರಾಯಣ ಅವರ ‘ಧರ್ಮಕಾರಣ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಒತ್ತಡ ಬಂದಿತ್ತು. ಆಗ ಶಾಸಕರಾಗಿದ್ದ ವಾಟಾಳ್ ನಾಗರಾಜ್, ಅದನ್ನು ವಿರೋಧಿಸಿ ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿ ಹಿಡಿದಿದ್ದರು. ಅವರೇ ಇಂದು ರಜನಿಕಾಂತ್ ಅಭಿನಯದ ‘ಕಾಲಾ’ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ!