<p><strong>ಕೋಲಾರ: </strong>‘ಬರಪೀಡಿತ ಜಿಲ್ಲೆಯಲ್ಲಿ ಸಸಿ ನೆಡುವ ಕಾರ್ಯವು ಜನಾಂದೋಲನ ಮಾದರಿಯಲ್ಲಿ ನಡೆಯಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಲತಾಕುಮಾರಿ ಆಶಿಸಿದರು.</p>.<p>ಅರಣ್ಯ ಇಲಾಖೆಯು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಜದುಂಡೆ (ಸೀಡ್ ಬಾಲ್) ತಯಾರಿಕೆ ಶಿಬಿರ ಉದ್ಘಾಟಿಸಿ ಮಾತನಾಡಿ, ‘ಜಿಲ್ಲೆಯ ಸರ್ಕಾರಿ ಜಾಗಗಳಲ್ಲಿ ದೊಡ್ಡ ಆಂದೋಲನದ ರೀತಿಯಲ್ಲಿ ಸಸಿ ನೆಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮಳೆಗಾಲದಲ್ಲಿ ಬೆಟ್ಟ ಗುಡ್ಡಗಳಲ್ಲಿ ಬೀಜದುಂಡೆ ಹಾಕುವುದರಿಂದ ಅವು ಬೆಳೆಯಲು ಸಹಾಯವಾಗುತ್ತದೆ. ಬೀಜದುಂಡೆಯ ಪ್ರಸಾರವು ಅಭಿಯಾನದ ಮಾದರಿಯಲ್ಲಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳು ಪಾಠ ಪ್ರವಚನಕ್ಕೆ ಸೀಮಿತವಾಗದೆ ಸಮಾಜಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ ಒಂದು ಸಾವಿರ ಸಸಿ ಬೆಳೆಸುವ ಗುರಿ ಹೊಂದಿದ್ದು, ಮುಂಗಾರು ಹಂಗಾಮಿನಲ್ಲಿ ಈ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಲಾಗಿದೆ. ನರೇಗಾ ಯೋಜನೆ ಅನುದಾನವನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತದೆ’ ಎಂದು ವಿವರಿಸಿದರು.</p>.<p><strong>ಒಳ್ಳೆಯ ಪ್ರಯತ್ನ</strong>: ‘ಸಂಘ ಸಂಸ್ಥೆಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ಶಾಲಾ ಮಕ್ಕಳಿಂದ ಬೀಜದುಂಡೆ ಸಿದ್ಧಪಡಿಸುತ್ತಿರುವುದು ಒಳ್ಳೆಯ ಪ್ರಯತ್ನ. ಇಂತಹ ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ಆಶಿಸಿದರು.</p>.<p>‘ಶಾಲಾ ಮಕ್ಕಳನ್ನು ಇಂತಹ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅವರಲ್ಲಿ ಪರಿಸರ ಕಾಳಜಿ ಮೂಡುತ್ತದೆ. ಶಿಕ್ಷಣ ಇಲಾಖೆಯು ಪ್ರತಿ ಶಾಲಾ ಆವರಣದಲ್ಲಿ ಗಿಡ ಬೆಳೆಸುವಂತೆ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿ ಹಸಿರು ಕ್ರಾಂತಿ ಸೃಷ್ಟಿಸಬಹುದು’ ಎಂದು ಕಿವಿಮಾತು ಹೇಳಿದರು.</p>.<p><strong>ಸಸಿ ನೆಡಲು ಪ್ರೋತ್ಸಾಹ: </strong>‘ಇಲಾಖೆಯಿಂದ ಸರ್ಕಾರಿ ಜಾಗಗಳು ಹಾಗೂ ಕೃಷಿ ಜಮೀನುಗಳಲ್ಲಿ ಸಸಿ ನೆಡಲು ಅಸಕ್ತಿಯಿರುವ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ. ರೈತರು ಸಸಿಗಳನ್ನು ಕೇಳಿದರೆ ವಿತರಣೆ ಮಾಡುತ್ತೇವೆ. ಇಲಾಖೆಯ ನರ್ಸರಿಗಳಲ್ಲಿ ಶ್ರೀಗಂಧ, ಬೇವು, ನೇರಳೆ, ಹೊಂಗೆ, ಆಲ, ಅರಳಿ, ನೆಲ್ಲಿ ಸೇರಿದಂತೆ ವಿವಿಧ ಸಸ್ಯಗಳ ಸುಮಾರು 2 ಟನ್ ಬೀಜ ಸಂಗ್ರಹಿಸಲಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ) ಶ್ರೀನಿವಾಸರಾವ್ ವಿವರಿಸಿದರು.</p>.<p>‘ಪ್ರಸಕ್ತ ವರ್ಷದಲ್ಲಿ ಶಾಲೆ, ಕಾಲೇಜು, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಜಿಲ್ಲೆಯ ಬೆಟ್ಟ ಗುಡ್ಡ, ಅರಣ್ಯ ಪ್ರದೇಶ, ಸರ್ಕಾರಿ ಭೂಮಿ ಹಾಗೂ ಕೆರೆ ಅಂಗಳದಲ್ಲಿ 5 ಲಕ್ಷ ಬೀಜದುಂಡೆ ಚೆಲ್ಲಲ್ಲು ನಿರ್ಧರಿಸಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಾಲಿನಿ, ಸಹಾಯಕ ವಲಯ ಅರಣ್ಯಾಧಿಕಾರಿ ಮನೋಹರ್, ಭಾರತ ಸಂಸ್ಥೆ ಮುಖ್ಯಸ್ಥ ತ್ಯಾಗರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಬರಪೀಡಿತ ಜಿಲ್ಲೆಯಲ್ಲಿ ಸಸಿ ನೆಡುವ ಕಾರ್ಯವು ಜನಾಂದೋಲನ ಮಾದರಿಯಲ್ಲಿ ನಡೆಯಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಲತಾಕುಮಾರಿ ಆಶಿಸಿದರು.</p>.<p>ಅರಣ್ಯ ಇಲಾಖೆಯು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಜದುಂಡೆ (ಸೀಡ್ ಬಾಲ್) ತಯಾರಿಕೆ ಶಿಬಿರ ಉದ್ಘಾಟಿಸಿ ಮಾತನಾಡಿ, ‘ಜಿಲ್ಲೆಯ ಸರ್ಕಾರಿ ಜಾಗಗಳಲ್ಲಿ ದೊಡ್ಡ ಆಂದೋಲನದ ರೀತಿಯಲ್ಲಿ ಸಸಿ ನೆಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಮಳೆಗಾಲದಲ್ಲಿ ಬೆಟ್ಟ ಗುಡ್ಡಗಳಲ್ಲಿ ಬೀಜದುಂಡೆ ಹಾಕುವುದರಿಂದ ಅವು ಬೆಳೆಯಲು ಸಹಾಯವಾಗುತ್ತದೆ. ಬೀಜದುಂಡೆಯ ಪ್ರಸಾರವು ಅಭಿಯಾನದ ಮಾದರಿಯಲ್ಲಿ ರೂಪುಗೊಳ್ಳಬೇಕು. ವಿದ್ಯಾರ್ಥಿಗಳು ಪಾಠ ಪ್ರವಚನಕ್ಕೆ ಸೀಮಿತವಾಗದೆ ಸಮಾಜಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ ಒಂದು ಸಾವಿರ ಸಸಿ ಬೆಳೆಸುವ ಗುರಿ ಹೊಂದಿದ್ದು, ಮುಂಗಾರು ಹಂಗಾಮಿನಲ್ಲಿ ಈ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಲಾಗಿದೆ. ನರೇಗಾ ಯೋಜನೆ ಅನುದಾನವನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತದೆ’ ಎಂದು ವಿವರಿಸಿದರು.</p>.<p><strong>ಒಳ್ಳೆಯ ಪ್ರಯತ್ನ</strong>: ‘ಸಂಘ ಸಂಸ್ಥೆಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ಶಾಲಾ ಮಕ್ಕಳಿಂದ ಬೀಜದುಂಡೆ ಸಿದ್ಧಪಡಿಸುತ್ತಿರುವುದು ಒಳ್ಳೆಯ ಪ್ರಯತ್ನ. ಇಂತಹ ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್ ಆಶಿಸಿದರು.</p>.<p>‘ಶಾಲಾ ಮಕ್ಕಳನ್ನು ಇಂತಹ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅವರಲ್ಲಿ ಪರಿಸರ ಕಾಳಜಿ ಮೂಡುತ್ತದೆ. ಶಿಕ್ಷಣ ಇಲಾಖೆಯು ಪ್ರತಿ ಶಾಲಾ ಆವರಣದಲ್ಲಿ ಗಿಡ ಬೆಳೆಸುವಂತೆ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿ ಹಸಿರು ಕ್ರಾಂತಿ ಸೃಷ್ಟಿಸಬಹುದು’ ಎಂದು ಕಿವಿಮಾತು ಹೇಳಿದರು.</p>.<p><strong>ಸಸಿ ನೆಡಲು ಪ್ರೋತ್ಸಾಹ: </strong>‘ಇಲಾಖೆಯಿಂದ ಸರ್ಕಾರಿ ಜಾಗಗಳು ಹಾಗೂ ಕೃಷಿ ಜಮೀನುಗಳಲ್ಲಿ ಸಸಿ ನೆಡಲು ಅಸಕ್ತಿಯಿರುವ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ. ರೈತರು ಸಸಿಗಳನ್ನು ಕೇಳಿದರೆ ವಿತರಣೆ ಮಾಡುತ್ತೇವೆ. ಇಲಾಖೆಯ ನರ್ಸರಿಗಳಲ್ಲಿ ಶ್ರೀಗಂಧ, ಬೇವು, ನೇರಳೆ, ಹೊಂಗೆ, ಆಲ, ಅರಳಿ, ನೆಲ್ಲಿ ಸೇರಿದಂತೆ ವಿವಿಧ ಸಸ್ಯಗಳ ಸುಮಾರು 2 ಟನ್ ಬೀಜ ಸಂಗ್ರಹಿಸಲಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ) ಶ್ರೀನಿವಾಸರಾವ್ ವಿವರಿಸಿದರು.</p>.<p>‘ಪ್ರಸಕ್ತ ವರ್ಷದಲ್ಲಿ ಶಾಲೆ, ಕಾಲೇಜು, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಜಿಲ್ಲೆಯ ಬೆಟ್ಟ ಗುಡ್ಡ, ಅರಣ್ಯ ಪ್ರದೇಶ, ಸರ್ಕಾರಿ ಭೂಮಿ ಹಾಗೂ ಕೆರೆ ಅಂಗಳದಲ್ಲಿ 5 ಲಕ್ಷ ಬೀಜದುಂಡೆ ಚೆಲ್ಲಲ್ಲು ನಿರ್ಧರಿಸಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>ತಾಲ್ಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಾಲಿನಿ, ಸಹಾಯಕ ವಲಯ ಅರಣ್ಯಾಧಿಕಾರಿ ಮನೋಹರ್, ಭಾರತ ಸಂಸ್ಥೆ ಮುಖ್ಯಸ್ಥ ತ್ಯಾಗರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>