ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿಯು ಸಾಲ ಮಾಡಿ ರೇಷ್ಮೆ ಹುಳು ಸಾಕಾಣಿಕೆ ಮಾಡುತ್ತಿದ್ದರು. ಇದರಿಂದ ಬಂದ ಹಣದಲ್ಲೇ ದಂಪತಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ, ದಂಪತಿಯ ಮಗಳು ಮತ್ತು ಅಳಿಯ ಲಕ್ಷ್ಮಣ್, ಮೊಮ್ಮಗ ಆನಂದ್ ಆಸ್ತಿ ಮೇಲಿನ ಆಸೆಗಾಗಿ ಬೆಳೆ ನಾಶಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.