<p><strong>ಕೋಲಾರ:</strong> ‘ಮಹಾ ಶಿವರಾತ್ರಿ ಪ್ರಯುಕ್ತ ತಾಲ್ಲೂಕಿನ ಹೊಳಲಿ ಗ್ರಾಮದ ಭೀಮಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಫೆ.21ರಿಂದ 24ರವರೆಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಭೀಮಲಿಂಗೇಶ್ವರಸ್ವಾಮಿ ದೇವಾಲಯದ ದತ್ತಾತ್ರೇಯ ಅವಧೂತ ಸ್ವಾಮೀಜಿ ತಿಳಿಸಿದರು.</p>.<p>ಹೊಳಲಿ ಗ್ರಾಮದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಫೆ.21ರಂದು ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಗಿರಿಜಾ, ಕಲ್ಯಾಣೋತ್ಸವ, ಉಯ್ಯಾಲೋತ್ಸವ ನಡೆಯಲಿದೆ’ ಎಂದು ಹೇಳಿದರು.</p>.<p>‘ಫೆ.22ರಂದು ಬ್ರಹ್ಮ ರಥೋತ್ಸವ, ದೇವರ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುತ್ತಾರೆ. ಉಚಿತ ಆಂಬುಲೆನ್ಸ್ ಸೇವೆಗೆ ಅದೇ ದಿನ ಚಾಲನೆ ನೀಡಲಾಗುತ್ತದೆ. ಅನ್ನ ಸಂತರ್ಪಣೆ, ಸಂಗೀತ ಮತ್ತು ಭರತ ನಾಟ್ಯ ಕಾರ್ಯಕ್ರಮ ನಡೆಯಲಿದೆ’ ಎಂದು ವಿವರಿಸಿದರು.</p>.<p>‘ಫೆ.23ರಂದು ಹಸಿ ಕರಗ, ಹೂವಿನ ಕರಗ ನಡೆಯಲಿದೆ. ಫೆ.24ರಂದು ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತವೆ. 4 ದಿನದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದು, ಜಿಲ್ಲಾಡಳಿತದ ಜತೆ ಚರ್ಚಿಸಲಾಗಿದೆ. ಪೊಲೀಸ್ ವ್ಯವಸ್ಥೆ, ಆರೋಗ್ಯ ಸೇವೆ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಜಿಲ್ಲೆಯಲ್ಲಿ ಸಾಮಾಜಿಕ ಸೇವೆ ನೀಡಲು ತೀರ್ಮಾನಿಸಲಾಗಿದ್ದು, ಹೊಳಲಿ ಗ್ರಾಮದಲ್ಲಿ ಗೋಶಾಲೆ ಆರಂಭಿಸಿ 100 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯಿದೆ. ಪೂಜಾ ಕಾರ್ಯ ಸ್ಥಗಿತಗೊಂಡಿರುವ ದೇವಾಲಯಗಳಿಗೆ ಅರ್ಚಕರನ್ನು ನೇಮಿಸಿ ಪೂಜಾ ಕಾರ್ಯ ನಡೆಸುತ್ತೇವೆ’ ಎಂದು ಮಾಹಿತಿ ನೀಡಿದರು.</p>.<p>‘ಹೊಳಲಿ ಶಾಲೆಯ 70 ಮಕ್ಕಳಿಗೆ ವೇದಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮತಾಂತರಿಗಳಿಂದ ಅನೇಕರು ತೊಂದರೆಗೆ ಒಳಗಾಗಿರುವ ಮಾಹಿತಿಯಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಸೇರಿಸಿ ಬಹಿರಂಗ ಸಭೆ ನಡೆಸುತ್ತೇವೆ. ಕೃಷಿ ಮತ್ತು ಉದ್ಯೋಗ ಮೇಳ ಸಹ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p><strong>ಪ್ರವಾಸಿ ತಾಣ: </strong>‘ಹೊಳಲಿ ಕ್ಷೇತ್ರವನ್ನು ಪ್ರವಾಸಿ ತಾಣ ಮಾಡಬೇಕು. ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗುತ್ತಿದ್ದು, ಗ್ರಾಮಕ್ಕೆ ಬಸ್ ಸೌಲಭ್ಯ ಹೆಚ್ಚಿಸಲು ಸ್ವಾಮೀಜಿಯು ಅಧಿಕಾರಿಗಳ ಜತೆ ಚರ್ಚಿಸಬೇಕು’ ಎಂದು ಹೊಳಲಿ ಗ್ರಾಮಸ್ಥ ಶಾಂತಾರಾಮ್ ಮನವಿ ಮಾಡಿದರು.</p>.<p>ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಸಮಾಜ ಸೇವಕರಾದ ಶಂಕರನಾರಾಯಣ, ಎಸ್.ಸಿ.ವೆಂಕಟಕೃಷ್ಣಪ್ಪ, ಹೊಳಲಿ ಗ್ರಾಮ ಪಂಚಾಯಿತಿ ಸದಸ್ಯ ಚಲಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮಹಾ ಶಿವರಾತ್ರಿ ಪ್ರಯುಕ್ತ ತಾಲ್ಲೂಕಿನ ಹೊಳಲಿ ಗ್ರಾಮದ ಭೀಮಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಫೆ.21ರಿಂದ 24ರವರೆಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಭೀಮಲಿಂಗೇಶ್ವರಸ್ವಾಮಿ ದೇವಾಲಯದ ದತ್ತಾತ್ರೇಯ ಅವಧೂತ ಸ್ವಾಮೀಜಿ ತಿಳಿಸಿದರು.</p>.<p>ಹೊಳಲಿ ಗ್ರಾಮದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಫೆ.21ರಂದು ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಗಿರಿಜಾ, ಕಲ್ಯಾಣೋತ್ಸವ, ಉಯ್ಯಾಲೋತ್ಸವ ನಡೆಯಲಿದೆ’ ಎಂದು ಹೇಳಿದರು.</p>.<p>‘ಫೆ.22ರಂದು ಬ್ರಹ್ಮ ರಥೋತ್ಸವ, ದೇವರ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುತ್ತಾರೆ. ಉಚಿತ ಆಂಬುಲೆನ್ಸ್ ಸೇವೆಗೆ ಅದೇ ದಿನ ಚಾಲನೆ ನೀಡಲಾಗುತ್ತದೆ. ಅನ್ನ ಸಂತರ್ಪಣೆ, ಸಂಗೀತ ಮತ್ತು ಭರತ ನಾಟ್ಯ ಕಾರ್ಯಕ್ರಮ ನಡೆಯಲಿದೆ’ ಎಂದು ವಿವರಿಸಿದರು.</p>.<p>‘ಫೆ.23ರಂದು ಹಸಿ ಕರಗ, ಹೂವಿನ ಕರಗ ನಡೆಯಲಿದೆ. ಫೆ.24ರಂದು ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತವೆ. 4 ದಿನದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದು, ಜಿಲ್ಲಾಡಳಿತದ ಜತೆ ಚರ್ಚಿಸಲಾಗಿದೆ. ಪೊಲೀಸ್ ವ್ಯವಸ್ಥೆ, ಆರೋಗ್ಯ ಸೇವೆ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಜಿಲ್ಲೆಯಲ್ಲಿ ಸಾಮಾಜಿಕ ಸೇವೆ ನೀಡಲು ತೀರ್ಮಾನಿಸಲಾಗಿದ್ದು, ಹೊಳಲಿ ಗ್ರಾಮದಲ್ಲಿ ಗೋಶಾಲೆ ಆರಂಭಿಸಿ 100 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯಿದೆ. ಪೂಜಾ ಕಾರ್ಯ ಸ್ಥಗಿತಗೊಂಡಿರುವ ದೇವಾಲಯಗಳಿಗೆ ಅರ್ಚಕರನ್ನು ನೇಮಿಸಿ ಪೂಜಾ ಕಾರ್ಯ ನಡೆಸುತ್ತೇವೆ’ ಎಂದು ಮಾಹಿತಿ ನೀಡಿದರು.</p>.<p>‘ಹೊಳಲಿ ಶಾಲೆಯ 70 ಮಕ್ಕಳಿಗೆ ವೇದಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮತಾಂತರಿಗಳಿಂದ ಅನೇಕರು ತೊಂದರೆಗೆ ಒಳಗಾಗಿರುವ ಮಾಹಿತಿಯಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಸೇರಿಸಿ ಬಹಿರಂಗ ಸಭೆ ನಡೆಸುತ್ತೇವೆ. ಕೃಷಿ ಮತ್ತು ಉದ್ಯೋಗ ಮೇಳ ಸಹ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p><strong>ಪ್ರವಾಸಿ ತಾಣ: </strong>‘ಹೊಳಲಿ ಕ್ಷೇತ್ರವನ್ನು ಪ್ರವಾಸಿ ತಾಣ ಮಾಡಬೇಕು. ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗುತ್ತಿದ್ದು, ಗ್ರಾಮಕ್ಕೆ ಬಸ್ ಸೌಲಭ್ಯ ಹೆಚ್ಚಿಸಲು ಸ್ವಾಮೀಜಿಯು ಅಧಿಕಾರಿಗಳ ಜತೆ ಚರ್ಚಿಸಬೇಕು’ ಎಂದು ಹೊಳಲಿ ಗ್ರಾಮಸ್ಥ ಶಾಂತಾರಾಮ್ ಮನವಿ ಮಾಡಿದರು.</p>.<p>ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಸಮಾಜ ಸೇವಕರಾದ ಶಂಕರನಾರಾಯಣ, ಎಸ್.ಸಿ.ವೆಂಕಟಕೃಷ್ಣಪ್ಪ, ಹೊಳಲಿ ಗ್ರಾಮ ಪಂಚಾಯಿತಿ ಸದಸ್ಯ ಚಲಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>