‘ಸರ್ಕಾರ ಕೋಲಾರ ಜಿಲ್ಲೆಗೆ ತರಕಾರಿ, ಹಣ್ಣು ಸಂಸ್ಕರಣಾ ಘಟಕ, ಕೈಗಾರಿಕಾ ವಲಯ ವಿಸ್ತರಣೆ, ಸುಸಜ್ಜಿತ ತೀವ್ರ ನಿಗಾ ಘಟಕ, ಉನ್ನತ ಪ್ರಯೋಗಾಲಯ ಹಾಗೂ ಎತ್ತಿನಹೊಳೆ ಯೋಜನೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಿದೆ. ಅಧಿವೇಶನ ನಡೆಯುತ್ತಿದ್ದು, ವಿಧಾನ ಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಸುತ್ತಾರೆ’ ಎಂದು ಭರವಸೆ ನೀಡಿದರು.