<p><strong>ಕೋಲಾರ:</strong> ‘ಕೋವಿಡ್–19 ಕಾರಣಕ್ಕೆ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮವನ್ನು 2021ರ ಅಕ್ಟೋಬರ್ ತಿಂಗಳಿಗೆ ಮುಂದೂಡಲಾಗಿದೆ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ರಾಜ್ಯ ಯುವ ಘಟಕದ ಅಧ್ಯಕ್ಷ ಎಂ.ಅಂಬರೀಶ್ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಬಾರಿ ನವೆಂಬರ್ ತಿಂಗಳಲ್ಲಿ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಎಲ್ಲೆಡೆ ಕೋವಿಡ್ ಆತಂಕ ಹೆಚ್ಚಿರುವ ಕಾರಣ ಕಾರ್ಯಕ್ರಮ ಮುಂದೂಡುವ ನಿರ್ಧಾರ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>‘ಮುಂದಿನ ವರ್ಷ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮಹಾ ದೀಕ್ಷಾ ಸಮಾರಂಭ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೂರ್ವಭಾವಿಯಾಗಿ ದೀಕ್ಷಾ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಿಂಗಳು ಹುಣ್ಣಿಮೆ ದಿನದಂದು ದೀಕ್ಷಾ ಕಾರ್ಯಕ್ರಮ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಮಟ್ಟದ ಪ್ರಥಮ ದೀಕ್ಷಾ ಕಾರ್ಯಕ್ರಮವನ್ನು ಮಲ್ಲಗಾನಹಳ್ಳಿಯಲ್ಲಿ ನ.12ರಂದು ನಡೆಸುತ್ತೇವೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬುದ್ಧ ಮಂಟಪ ಅನಾವರಣಗೊಳಿಸಲಾಗುತ್ತದೆ. ಅದೇ ದಿನ ಕೊಳ್ಳೇಗಾಲದ ಹಿರಿಯ ಬಿಕ್ಕು ಮನೋರಕ್ಕಿತ ಅವರು ಸುಮಾರು 5 ಸಾವಿರ ಮಂದಿಗೆ ಬೌದ್ಧ ಧರ್ಮದ ದೀಕ್ಷೆ ನೀಡುತ್ತಾರೆ’ ಎಂದು ಹೇಳಿದರು.</p>.<p>‘ಬೌದ್ಧ ಬಿಕ್ಕುಗಳು, ಸಾಹಿತಿಗಳು, ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಆರ್.ರಮೇಶ್ಕುಮಾರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದರು.</p>.<p>ಸಮತಾ ಸೈನಿಕ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಯ್ಯ, ಆರ್ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುನೀಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬೇಟಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ಪಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕೋವಿಡ್–19 ಕಾರಣಕ್ಕೆ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮವನ್ನು 2021ರ ಅಕ್ಟೋಬರ್ ತಿಂಗಳಿಗೆ ಮುಂದೂಡಲಾಗಿದೆ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ರಾಜ್ಯ ಯುವ ಘಟಕದ ಅಧ್ಯಕ್ಷ ಎಂ.ಅಂಬರೀಶ್ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಬಾರಿ ನವೆಂಬರ್ ತಿಂಗಳಲ್ಲಿ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಎಲ್ಲೆಡೆ ಕೋವಿಡ್ ಆತಂಕ ಹೆಚ್ಚಿರುವ ಕಾರಣ ಕಾರ್ಯಕ್ರಮ ಮುಂದೂಡುವ ನಿರ್ಧಾರ ಮಾಡಲಾಗಿದೆ’ ಎಂದು ವಿವರಿಸಿದರು.</p>.<p>‘ಮುಂದಿನ ವರ್ಷ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮಹಾ ದೀಕ್ಷಾ ಸಮಾರಂಭ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೂರ್ವಭಾವಿಯಾಗಿ ದೀಕ್ಷಾ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಿಂಗಳು ಹುಣ್ಣಿಮೆ ದಿನದಂದು ದೀಕ್ಷಾ ಕಾರ್ಯಕ್ರಮ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಮಟ್ಟದ ಪ್ರಥಮ ದೀಕ್ಷಾ ಕಾರ್ಯಕ್ರಮವನ್ನು ಮಲ್ಲಗಾನಹಳ್ಳಿಯಲ್ಲಿ ನ.12ರಂದು ನಡೆಸುತ್ತೇವೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬುದ್ಧ ಮಂಟಪ ಅನಾವರಣಗೊಳಿಸಲಾಗುತ್ತದೆ. ಅದೇ ದಿನ ಕೊಳ್ಳೇಗಾಲದ ಹಿರಿಯ ಬಿಕ್ಕು ಮನೋರಕ್ಕಿತ ಅವರು ಸುಮಾರು 5 ಸಾವಿರ ಮಂದಿಗೆ ಬೌದ್ಧ ಧರ್ಮದ ದೀಕ್ಷೆ ನೀಡುತ್ತಾರೆ’ ಎಂದು ಹೇಳಿದರು.</p>.<p>‘ಬೌದ್ಧ ಬಿಕ್ಕುಗಳು, ಸಾಹಿತಿಗಳು, ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಆರ್.ರಮೇಶ್ಕುಮಾರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದರು.</p>.<p>ಸಮತಾ ಸೈನಿಕ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಯ್ಯ, ಆರ್ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುನೀಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬೇಟಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ಪಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>