<p><strong>ಶ್ರೀನಿವಾಸಪುರ</strong>: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿಯೇ ರಸ್ತೆ ಗುಂಡಿಗಳು ಬಿದ್ದಿದ್ದು, ವಾಹನಗಳ ಸಂಚಾರ ಹಾಗೂ ಜನರ ಓಡಾಟಕ್ಕೆ ತೊಂದರೆ ಉಂಟಾಗಿದೆ.</p>.<p>ಈ ಭಾಗದಲ್ಲಿ ನಿತ್ಯ ನೂರಾರು ವಾಹನಗಳ ಸಂಚರಿಸುತ್ತವೆ, ಸಾವಿರಾರು ಜನ ಓಡಾಡುತ್ತಾರೆ. ಪ್ರವೇಶ ದ್ವಾರದಲ್ಲೇ ದೊಡ್ಡ ಗುಂಡಿ ಬಿದ್ದು ನೀರು ತುಂಬಿಕೊಂಡಿದ್ದರೂ ಗಮನಿಸುವವರು ಇಲ್ಲವಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಹಳ ದಿನಗಳಿಂದ ಇದೇ ಪರಿಸ್ಥಿತಿ ಇದ್ದು, ಗುಂಡಿಗಳನ್ನು ಮುಚ್ಚುವ ಕೆಲಸ ನಡೆದಿಲ್ಲ ಎಂದು ದೂರಿದ್ದಾರೆ.</p>.<p>ಪಟ್ಟಣದ ಬೆಸ್ಕಾಂ ಇಲಾಖೆಯ ಮುಂಭಾಗದ ರಸ್ತೆಯಲ್ಲೂ ಗುಂಡಿಗಳು ಬಿದ್ದಿದ್ದು, ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ನಾಗರಿಕರು ಟೀಕಿಸಿದ್ದಾರೆ.</p>.<p>ನಾಗರಿಕ ವೇದಿಕೆ ಮುಖಂಡ ವೆಂಕಟೇಶ್ಗೌಡ ಮಾತನಾಡಿ, ‘ಸರ್ಕಾರ ಕೋಟಿಗಟ್ಟಲೇ ಸಾರ್ವಜನಿಕರಿಂದ ತೆರಿಗೆ ವಸೂಲಿ ಮಾಡುತ್ತದೆ. ಆದರೆ, ಸಾರ್ವಜನಿಕರಿಗೆ ಅಗತ್ಯವಾದ ಕನಿಷ್ಠ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ತಕ್ಷಣ ಎಚ್ಚೆತ್ತು ಸಂಬಂಧಪಟ್ಟ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ</strong>: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿಯೇ ರಸ್ತೆ ಗುಂಡಿಗಳು ಬಿದ್ದಿದ್ದು, ವಾಹನಗಳ ಸಂಚಾರ ಹಾಗೂ ಜನರ ಓಡಾಟಕ್ಕೆ ತೊಂದರೆ ಉಂಟಾಗಿದೆ.</p>.<p>ಈ ಭಾಗದಲ್ಲಿ ನಿತ್ಯ ನೂರಾರು ವಾಹನಗಳ ಸಂಚರಿಸುತ್ತವೆ, ಸಾವಿರಾರು ಜನ ಓಡಾಡುತ್ತಾರೆ. ಪ್ರವೇಶ ದ್ವಾರದಲ್ಲೇ ದೊಡ್ಡ ಗುಂಡಿ ಬಿದ್ದು ನೀರು ತುಂಬಿಕೊಂಡಿದ್ದರೂ ಗಮನಿಸುವವರು ಇಲ್ಲವಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಹಳ ದಿನಗಳಿಂದ ಇದೇ ಪರಿಸ್ಥಿತಿ ಇದ್ದು, ಗುಂಡಿಗಳನ್ನು ಮುಚ್ಚುವ ಕೆಲಸ ನಡೆದಿಲ್ಲ ಎಂದು ದೂರಿದ್ದಾರೆ.</p>.<p>ಪಟ್ಟಣದ ಬೆಸ್ಕಾಂ ಇಲಾಖೆಯ ಮುಂಭಾಗದ ರಸ್ತೆಯಲ್ಲೂ ಗುಂಡಿಗಳು ಬಿದ್ದಿದ್ದು, ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ನಾಗರಿಕರು ಟೀಕಿಸಿದ್ದಾರೆ.</p>.<p>ನಾಗರಿಕ ವೇದಿಕೆ ಮುಖಂಡ ವೆಂಕಟೇಶ್ಗೌಡ ಮಾತನಾಡಿ, ‘ಸರ್ಕಾರ ಕೋಟಿಗಟ್ಟಲೇ ಸಾರ್ವಜನಿಕರಿಂದ ತೆರಿಗೆ ವಸೂಲಿ ಮಾಡುತ್ತದೆ. ಆದರೆ, ಸಾರ್ವಜನಿಕರಿಗೆ ಅಗತ್ಯವಾದ ಕನಿಷ್ಠ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ತಕ್ಷಣ ಎಚ್ಚೆತ್ತು ಸಂಬಂಧಪಟ್ಟ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>