ನಗರದ ಅಶೋಕನಗರ ನಿವಾಸಿ ಶ್ರೀಧರ್ (45) ಬೆಮಲ್ ಕಾರ್ಖಾನೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಕಾರ್ಖಾನೆಯಲ್ಲಿ ಯಂತ್ರ ತೊಳೆಯುವ ಕಾರ್ಯ ನಿರ್ವಹಿಸುತ್ತಿದ್ದಾಗ, ಆಕಸ್ಮಿಕವಾಗಿ ವಿದ್ಯುತ್ ಸಂಪರ್ಕ ಉಂಟಾಗಿ, ಕೆಳಗೆ ಬಿದ್ದರು. ತಲೆಗೆ ಕೂಡ ಪೆಟ್ಟಾಗಿತ್ತು. ಸ್ಥಳದಲ್ಲಿಯೇ ಅವರು ಮೃತಪಟ್ಟಿದ್ದರು.