ಇದೇ ಮೊದಲ ಬಾರಿಗೆ ರಾಜ್ಯದೆಲ್ಲೆಡೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದ್ದು, ಮಂಗಳವಾರ ಗಣಿತ ಪರೀಕ್ಷೆ ನಿಗದಿಯಾಗಿತ್ತು. ಬೆಳಿಗ್ಗೆ 9.30ಕ್ಕೆ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ, ಅರ್ಧ ತಾಸು ಮುನ್ನವೇ ಬಂಗಾರಪೇಟೆ ತಾಲ್ಲೂಕಿನ ಶಾಲೆಗಳಲ್ಲಿ ಗಣಿತ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ.