<p><strong>ಮುಳಬಾಗಿಲು: ‘</strong>ಯಾವುದೇ ಒಂದು ಸಂಘಟನೆ ಸ್ಥಾಪನೆಯಾದರೆ ಅದರಿಂದ ಸಮಾಜದಲ್ಲಿ ಒಳ್ಳೆಯ ಕೆಲಸಗಳು ನಡೆದಾಗ ಮಾತ್ರ ಆ ಸಂಘಟನೆಯು ಸಾರ್ಥಕತೆ ಪಡೆದುಕೊಳ್ಳುತ್ತದೆ’ ಎಂದು ಕನಕ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಆರ್. ವೆಂಕಟೇಶಪ್ಪ ಹೇಳಿದರು.</p>.<p>ನಗರದ ಕುರುಬರಪೇಟೆಯ ಕನಕ ಭವನದಲ್ಲಿ ಎಸ್.ಜಿ ಫ್ರೆಶ್ ಚಿಕನ್ ಮಾರಾಟ ಮಳಿಗೆಯಿಂದ ಕನಕ ನೌಕರರ ಸಂಘದ 2021ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಂಘಟನೆ ಸ್ಥಾಪನೆಯಿಂದ ಅಧಿಕಾರ ಸಿಗಬಹುದು. ಆದರೆ, ಆ ಅಧಿಕಾರವನ್ನು ಸಮಾಜದ ಉದ್ಧಾರಕ್ಕಾಗಿ ಬಳಕೆ ಮಾಡಿದಾಗ ಮಾತ್ರ ಅಂತಹ ಸಂಘಟನೆ ಉತ್ತಮ ಹೆಸರು ಗಳಿಸಲು ಸಾಧ್ಯ ಎಂದರು.</p>.<p>ಕನಕ ನೌಕರರ ಸಂಘವು ತಾಲ್ಲೂಕಿನಾದ್ಯಂತ ತನ್ನದೇ ಆದ ರೀತಿಯಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಸಾಕಷ್ಟು ಕಾರ್ಯಕ್ರಮಗಳು ಯಶಸ್ಸು ಕಾಣಲು ಸಂಘದ ಪದಾಧಿಕಾರಿಗಳ ಶ್ರಮ ತುಂಬಾ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಸಂಘ ಇದೇ ರೀತಿ ಮುಂದುವರಿದು ಮುಂದಿನ ತಲೆಮಾರಿನವರಿಗೆ ಒಳ್ಳೆಯ ಮಾರ್ಗದರ್ಶನ ನೀಡಬೇಕು. ಇದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.</p>.<p>ಕನಕ ನೌಕರರ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಶಂಕರಪ್ಪ, ಖಜಾಂಚಿ ಲೋಕೇಶ್, ಆದಿನಾರಾಯಣ, ಸುಬ್ರಮಣಿ, ಮಂಜುನಾಥ್, ರಂಗಣ್ಣ, ನಾರಾಯಣಸ್ವಾಮಿ, ಅಯ್ಯಪ್ಪ, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು: ‘</strong>ಯಾವುದೇ ಒಂದು ಸಂಘಟನೆ ಸ್ಥಾಪನೆಯಾದರೆ ಅದರಿಂದ ಸಮಾಜದಲ್ಲಿ ಒಳ್ಳೆಯ ಕೆಲಸಗಳು ನಡೆದಾಗ ಮಾತ್ರ ಆ ಸಂಘಟನೆಯು ಸಾರ್ಥಕತೆ ಪಡೆದುಕೊಳ್ಳುತ್ತದೆ’ ಎಂದು ಕನಕ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಆರ್. ವೆಂಕಟೇಶಪ್ಪ ಹೇಳಿದರು.</p>.<p>ನಗರದ ಕುರುಬರಪೇಟೆಯ ಕನಕ ಭವನದಲ್ಲಿ ಎಸ್.ಜಿ ಫ್ರೆಶ್ ಚಿಕನ್ ಮಾರಾಟ ಮಳಿಗೆಯಿಂದ ಕನಕ ನೌಕರರ ಸಂಘದ 2021ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಂಘಟನೆ ಸ್ಥಾಪನೆಯಿಂದ ಅಧಿಕಾರ ಸಿಗಬಹುದು. ಆದರೆ, ಆ ಅಧಿಕಾರವನ್ನು ಸಮಾಜದ ಉದ್ಧಾರಕ್ಕಾಗಿ ಬಳಕೆ ಮಾಡಿದಾಗ ಮಾತ್ರ ಅಂತಹ ಸಂಘಟನೆ ಉತ್ತಮ ಹೆಸರು ಗಳಿಸಲು ಸಾಧ್ಯ ಎಂದರು.</p>.<p>ಕನಕ ನೌಕರರ ಸಂಘವು ತಾಲ್ಲೂಕಿನಾದ್ಯಂತ ತನ್ನದೇ ಆದ ರೀತಿಯಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಸಾಕಷ್ಟು ಕಾರ್ಯಕ್ರಮಗಳು ಯಶಸ್ಸು ಕಾಣಲು ಸಂಘದ ಪದಾಧಿಕಾರಿಗಳ ಶ್ರಮ ತುಂಬಾ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಸಂಘ ಇದೇ ರೀತಿ ಮುಂದುವರಿದು ಮುಂದಿನ ತಲೆಮಾರಿನವರಿಗೆ ಒಳ್ಳೆಯ ಮಾರ್ಗದರ್ಶನ ನೀಡಬೇಕು. ಇದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.</p>.<p>ಕನಕ ನೌಕರರ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಶಂಕರಪ್ಪ, ಖಜಾಂಚಿ ಲೋಕೇಶ್, ಆದಿನಾರಾಯಣ, ಸುಬ್ರಮಣಿ, ಮಂಜುನಾಥ್, ರಂಗಣ್ಣ, ನಾರಾಯಣಸ್ವಾಮಿ, ಅಯ್ಯಪ್ಪ, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>