<p><strong>ಕೋಲಾರ</strong>: ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಉಂಟಾಗುತ್ತಿರುವ ಮಧುಮೇಹ ಹಾಗೂ ರಕ್ತದೊತ್ತಡದಂತಹ ಕಾಯಿಲೆಗಳನ್ನು ತಡೆಗಟ್ಟಲು ಸಾರ್ವಜನಿಕರು ಸಿರಿಧಾನ್ಯಗಳ ಬಳಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಸಲಹೆ ನೀಡಿದರು.</p>.<p>ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಿರಿಧಾನ್ಯಗಳು ಕೇವಲ ಆಹಾರವಲ್ಲ; ಅವು ಪೌಷ್ಟಿಕಾಂಶಗಳ ಆಗರ. ಅಕ್ಕಿ ಮತ್ತು ಗೋಧಿಗೆ ಹೋಲಿಸಿದರೆ ಇವುಗಳಲ್ಲಿ ಕ್ಯಾಲ್ಸಿಯಂ, ಕಬ್ಬಿಣದಂಶ, ವಿಟಮಿನ್ ಹಾಗೂ ನಾರಿನಂಶ ಹೇರಳವಾಗಿದೆ. ಜಂಕ್ ಫುಡ್, ಬೇಕರಿ ಪದಾರ್ಥಗಳ ವ್ಯಾಮೋಹದಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು.</p>.<p>ಜಿಲ್ಲೆಯಲ್ಲಿ ಸುಮಾರು 10 ಸಾವಿರ ಸ್ವಸಹಾಯ ಗುಂಪುಗಳಿದ್ದು, 1 ಲಕ್ಷ ಸದಸ್ಯರಿದ್ದಾರೆ. ಇವರ ಮೂಲಕ ಸಿರಿಧಾನ್ಯಗಳ ಮಹತ್ವವನ್ನು ಮನೆ ಮನೆಗೆ ತಲುಪಿಸುವುದು ಸುಲಭ ಎಂದರು.</p>.<p>ಜಂಟಿ ಕೃಷಿ ನಿರ್ದೇಶಕಿ ಜಾವೇದಾ ನಸೀಮಾ ಖಾನಮ್ ಮಾತನಾಡಿ, ‘ಸಿರಿಧಾನ್ಯಗಳಲ್ಲಿ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ರಾಗಿ ಎಂದರೆ ಕೇವಲ ಮುದ್ದೆ ಅಥವಾ ರೊಟ್ಟಿಯಷ್ಟೇ ಅಲ್ಲದೆ, ಅದರಿಂದ ಶಾವಿಗೆ, ಚಕ್ಕುಲಿ, ಕೋಡುಬಳೆ ಹಾಗೂ ವಿವಿಧ ಸಿಹಿ ತಿಂಡಿಗಳನ್ನು ತಯಾರಿಸಬಹುದು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ಕೃಷಿ ಉಪನಿರ್ದೇಶಕ ನಾಗರಾಜ್, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎನ್.ಕವನಾ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಉಂಟಾಗುತ್ತಿರುವ ಮಧುಮೇಹ ಹಾಗೂ ರಕ್ತದೊತ್ತಡದಂತಹ ಕಾಯಿಲೆಗಳನ್ನು ತಡೆಗಟ್ಟಲು ಸಾರ್ವಜನಿಕರು ಸಿರಿಧಾನ್ಯಗಳ ಬಳಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಸಲಹೆ ನೀಡಿದರು.</p>.<p>ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಿರಿಧಾನ್ಯಗಳು ಕೇವಲ ಆಹಾರವಲ್ಲ; ಅವು ಪೌಷ್ಟಿಕಾಂಶಗಳ ಆಗರ. ಅಕ್ಕಿ ಮತ್ತು ಗೋಧಿಗೆ ಹೋಲಿಸಿದರೆ ಇವುಗಳಲ್ಲಿ ಕ್ಯಾಲ್ಸಿಯಂ, ಕಬ್ಬಿಣದಂಶ, ವಿಟಮಿನ್ ಹಾಗೂ ನಾರಿನಂಶ ಹೇರಳವಾಗಿದೆ. ಜಂಕ್ ಫುಡ್, ಬೇಕರಿ ಪದಾರ್ಥಗಳ ವ್ಯಾಮೋಹದಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು.</p>.<p>ಜಿಲ್ಲೆಯಲ್ಲಿ ಸುಮಾರು 10 ಸಾವಿರ ಸ್ವಸಹಾಯ ಗುಂಪುಗಳಿದ್ದು, 1 ಲಕ್ಷ ಸದಸ್ಯರಿದ್ದಾರೆ. ಇವರ ಮೂಲಕ ಸಿರಿಧಾನ್ಯಗಳ ಮಹತ್ವವನ್ನು ಮನೆ ಮನೆಗೆ ತಲುಪಿಸುವುದು ಸುಲಭ ಎಂದರು.</p>.<p>ಜಂಟಿ ಕೃಷಿ ನಿರ್ದೇಶಕಿ ಜಾವೇದಾ ನಸೀಮಾ ಖಾನಮ್ ಮಾತನಾಡಿ, ‘ಸಿರಿಧಾನ್ಯಗಳಲ್ಲಿ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ರಾಗಿ ಎಂದರೆ ಕೇವಲ ಮುದ್ದೆ ಅಥವಾ ರೊಟ್ಟಿಯಷ್ಟೇ ಅಲ್ಲದೆ, ಅದರಿಂದ ಶಾವಿಗೆ, ಚಕ್ಕುಲಿ, ಕೋಡುಬಳೆ ಹಾಗೂ ವಿವಿಧ ಸಿಹಿ ತಿಂಡಿಗಳನ್ನು ತಯಾರಿಸಬಹುದು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ಕೃಷಿ ಉಪನಿರ್ದೇಶಕ ನಾಗರಾಜ್, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎನ್.ಕವನಾ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>