‘ಬ್ಯಾಂಕಿನಿಂದ ಎರಡೂ ಜಿಲ್ಲೆಯ ರೈತರಿಗೆ, ಮಹಿಳಯರಿಗೆ ವಿವಿಧ ರೀತಿಯ ಸಾಲ ನೀಡಲಾಗಿದ್ದು, ಅವರು ಶೇ.100ರಷ್ಟು ಮರುಪಾವತಿ ಮಾಡುತ್ತಿದ್ದಾರೆ. ಅವರಲ್ಲಿ ಇರುವ ಪ್ರಮಾಣಿಕತೆ ನಿಮಗಿಲ್ಲವೇ, ಮರುಪಾವತಿಸಿ ಗೌರವ ಉಳಿಸಿಕೊಳ್ಳಿ, ಇಲ್ಲವಾದಲ್ಲಿ ನಿಮ್ಮ ಆಸ್ತಿಗಳ ಜಪ್ತಿಗೆ ಈಗಾಗಲೇ ಅಂತಿಮ ನೋಟೀಸ್ ನೀಡಲಾಗಿದ್ದು, ಶಿಫಾರಸ್ಸು, ಪ್ರಭಾವಗಳಿಗೆ ಒಳಗಾಗದೇ ಹರಾಜು ಹಾಕಲಾಗುವುದು’ ಎಂದು ತಾಕೀತು ಮಾಡಿದರು.