ಬಾಲ ಕಾರ್ಮಿಕರಿರುವ ಬಗ್ಗೆ ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಕಾರ್ಖಾನೆಯ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಬಚ್ಪನ್ ಬಚಾವೋ ಆಂದೋಲನದ ರಾಜ್ಯ ಸಂಚಾಲಕ ಬಿನು ಕೂರ್ಗೀಸ್, ಮಕ್ಕಳ ಸಹಾಯವಾಣಿ ಸಿಬ್ಬಂದಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚವ್ವೇನಹಳ್ಳಿ ವಿಜಿ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಎಂ.ವಿ. ಶ್ರೀನಿವಾಸ್, ದಸಂಸ ತಾಲೂಕು ಅಧ್ಯಕ್ಷ ಎಸ್.ಎಂ. ವೆಂಕಟೇಶ್, ಹಾರೋಹಳ್ಳಿ ಮುನಿರಾಜ್ ಹಾಜರಿದ್ದರು.