ಹಾಲಿನ ವಾಹನಗಳು, ರೈತರು ತಾವು ಬೆಳೆದಂತಹ ತರಕಾರಿ ಸೊಪ್ಪುಗಳನ್ನು ಮಾರುಕಟ್ಟೆಗೆ ಸಾಗಿಸಲು ಈ ರಸ್ತೆಯು ಬಹಳ ಮುಖ್ಯವಾಗಿದೆ. ಆದರೆ ಈ ರಸ್ತೆ ಹದಗೆಟ್ಟಿದ್ದು ಶೋಚನೀಯವಾಗಿದೆ. ರಸ್ತೆ ಸರಿಪಡಿಸುವಂತೆ ದಿನ್ನೆ ಹೊಸಹಳ್ಳಿ ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಮುಖಂಡ ವೀರಭದ್ರ ಸ್ವಾಮಿ, ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.