ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಪಿಎಂಸಿ ಕಮಿಷನ್ ದಂಧೆ ತಡೆಯಿರಿ’

Last Updated 18 ಸೆಪ್ಟೆಂಬರ್ 2020, 6:30 IST
ಅಕ್ಷರ ಗಾತ್ರ

ಬಂಗಾರಪೇಟೆ: ಎಪಿಎಂಸಿಯಲ್ಲಿ ರೈತರಿಂದ ವಸೂಲಿ ಮಾಡುತ್ತಿರುವ ಕಮಿಷನ್ ದಂಧೆ ತಡೆಯಬೇಕು. ರೈತರಿಗೆ ಮೂಲಸೌಕರ್ಯ ಒದಗಿ ಒದಗಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಸದಸ್ಯರು ಎಪಿಎಂಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಇಲ್ಲಿನ ಎಪಿಎಂಸಿಗೆ ಜಿಲ್ಲೆ ಹಾಗೂ ನೆರೆಯ ಆಂಧ್ರ, ತಮಿಳುನಾಡಿನಿಂದ ರೈತರು ತರಕಾರಿ ತೆಗೆದುಕೊಂಡು ಬರುತ್ತಾರೆ. ಅವರಿಗೆ ತಂಗಲು ಭವನವಿಲ್ಲ. ಕುಡಿಯಲು ನೀರಿಲ್ಲ. ಸಮರ್ಪಕ ಶೌಚಾಲಯ ಸೌಲಭ್ಯವಿಲ್ಲ ಎಂದು ಅವರು ಅರೋಪಿಸಿದರು.

ಇಲ್ಲಿನ ಎಪಿಎಂಸಿಯಲ್ಲಿ ವ್ಯಾಪಾರಿಗಳು ರೈತರಿಂದ ಶೇ 10ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಈ ಬಗ್ಗೆ ಕೇಳುವವರೇ ಇಲ್ಲವಾಗಿದೆ. ಕೂಡಲೆ ಕಮಿಷನ್ ದಂಧೆಗೆ ಕಡಿವಾಣ ಹಾಕಿ, ಮಾರುಕಟ್ಟೆಗೆ ಮೂಲ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್. ರಾಮೇಗೌಡ ಒತ್ತಾಯಿಸಿದರು.

ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಜಿಲ್ಲಾ ಘಟಕದ ಉಪಾಧ್ಯಕ್ಷ ಪಕ್ಷಣ್, ತಾಲ್ಲೂಕು ಅಧ್ಯಕ್ಷ ಗೋಪಿನಾಥ್, ರಘು, ಟಿ.ಕೆ. ಶ್ರೀನಿವಾಸ್, ಸುಮಿತ್ರ, ಸುರೇಶ್‌ರೆಡ್ಡಿ, ಜಯರಾಮಪ್ಪ, ಕೆ.ಪಿ. ನಾರಾಯಣಸ್ವಾಮಿ, ವಿ.ಸ್ವಾಮಿ, ಮುನಿವೆಂಕಟಪ್ಪ, ವೆಂಕಟೇಶ್, ಗೋವಿಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT