<p><strong>ಕೋಲಾರ:</strong> ‘ಅಂಬೇಡ್ಕರ್ ಭವನಗಳನ್ನು ದಲಿತ ಸಮುದಾಯದ ಗುತ್ತಿಗೆದಾರರಿಂದ ನಿರ್ಮಾಣ ಮಾಡಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಜ.27ರಂದು ಧರಣಿ ನಡೆಸುತ್ತೇವೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವರ್ತೂರು ಪ್ರಕಾಶ್ ಅವರು ಶಾಸಕರಾಗಿದ್ದಾಗ ಸರ್ಕಾರ ತಾಲ್ಲೂಕಿಗೆ 79 ಅಂಬೇಡ್ಕರ್ ಭವನ ಮಂಜೂರು ಮಾಡಿತ್ತು. ಆದರೆ, ಕಾಮಗಾರಿ ನನೆಗುದಿಗೆ ಬಿದ್ದಿದ್ದರಿಂದ ಈಗ ಕೆಲಸ ಕೈಗೆತ್ತಿಕೊಳ್ಳಲಾಗಿದೆ’ ಎಂದರು.</p>.<p>‘ನಿರ್ಮಿತಿ ಕೇಂದ್ರದವರು ಸರಿಯಾಗಿ ಕೆಲಸ ಮಾಡುವುದಿಲ್ಲ. ಅವರ ಕಾಮಗಾರಿಯ ಗುಣಮಟ್ಟ ಕಳಪೆಯಾಗಿರುತ್ತದೆ. ನಿರ್ಮಿತಿ ಕೇಂದ್ರದ ನಿರ್ದೇಶಕ ನಾರಾಯಣಗೌಡರು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವುದಿಲ್ಲ. ಹೀಗಾಗಿ ನಿರ್ಮಿತಿ ಕೇಂದ್ರಕ್ಕೆ ಅಂಬೇಡ್ಕರ್ ಭವನಗಳ ಕಾಮಗಾರಿ ಕೊಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಅಪರೂಪಕ್ಕೆ ಅಂಬೇಡ್ಕರ್ ಭವನಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಭವನಗಳು ಹೆಚ್ಚು ಕಾಲ ಉಳಿಯಬೇಕು. ಪ್ರತಿ ಘಟಕಕ್ಕೆ ಸರ್ಕಾರ ನೀಡಿರುವ ₹ 12 ಲಕ್ಷದ ಜತೆಗೆ ಗ್ರಾಮದ ಜನರು ಮತ್ತಷ್ಟು ಹಣ ಹಾಕಿ ಉತ್ತಮವಾಗಿ ಭವನ ನಿರ್ಮಿಸಿಕೊಳ್ಳಲು ಅವಕಾಶವಿದೆ. ಆದ ಕಾರಣ ದಲಿತ ಸಮುದಾಯದ ಗುತ್ತಿಗೆದಾರರಿಗೆ ಭವನದ ಕಾಮಗಾರಿ ನೀಡುವುದು ಸೂಕ್ತ’ ಎಂದು ಅಭಿಪ್ರಾಯಪಟ್ಟರು.</p>.<p>‘ಭವನಗಳಿಗೆ ಬಿಡುಗಡೆಯಾಗಿರುವ ಅನುದಾನ ಸದ್ಬಳಕೆಯಾಗಬೇಕು. ನಿರ್ಮಿತಿ ಕೇಂದ್ರಕ್ಕೆ ನೀಡಿರುವ ಭವನಗಳ ಕಾಮಗಾರಿಯ ಗುತ್ತಿಗೆಯನ್ನು ಜಿಲ್ಲಾಧಿಕಾರಿಯು ಹಿಂಪಡೆಯಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಗುಡುಗಿದರು.</p>.<p><strong>ಅಕ್ರಮ ಗಣಿಗಾರಿಕೆ:</strong> ‘ತಾಲ್ಲೂಕಿನ ಹಲವೆಡೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಗಣಿಗಾರಿಕೆ ಸ್ಥಳದಲ್ಲಿ ಜಿಲೆಟಿನ್ ಕಡ್ಡಿಗಳ ಸ್ಫೋಟಗಳು ದೊಡ್ಡ ಅನಾಹುತ ನಡೆದಿದೆ. ತಾಲ್ಲೂಕಿನ ಕ್ವಾರಿಗಳಲ್ಲೂ ಅಂತಹ ದುರ್ಘಟನೆ ನಡೆಯುವ ಸಾಧ್ಯತೆಯಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನ ತಲಗುಂದ, ನರಸಾಪುರ ಸುತ್ತಮುತ್ತ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ದೊಡ್ಡ ಶ್ರೀಮಂತರು ಪರವಾನಗಿ ಇಲ್ಲದೆ ಕ್ವಾರಿ ನಡೆಸುತ್ತಿದ್ದಾರೆ. ಸಂಸದ ಎಸ್.ಮುನಿಸ್ವಾಮಿ ಅವರು ಸಹ ಹಲವು ಬಾರಿ ಈ ಸಂಗತಿ ಪ್ರಸ್ತಾಪಿಸಿದ್ದಾರೆ. ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಈ ಅಕ್ರಮ ತಡೆಯಲು ವಿಫಲವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಅಂಬೇಡ್ಕರ್ ಭವನಗಳನ್ನು ದಲಿತ ಸಮುದಾಯದ ಗುತ್ತಿಗೆದಾರರಿಂದ ನಿರ್ಮಾಣ ಮಾಡಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಜ.27ರಂದು ಧರಣಿ ನಡೆಸುತ್ತೇವೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವರ್ತೂರು ಪ್ರಕಾಶ್ ಅವರು ಶಾಸಕರಾಗಿದ್ದಾಗ ಸರ್ಕಾರ ತಾಲ್ಲೂಕಿಗೆ 79 ಅಂಬೇಡ್ಕರ್ ಭವನ ಮಂಜೂರು ಮಾಡಿತ್ತು. ಆದರೆ, ಕಾಮಗಾರಿ ನನೆಗುದಿಗೆ ಬಿದ್ದಿದ್ದರಿಂದ ಈಗ ಕೆಲಸ ಕೈಗೆತ್ತಿಕೊಳ್ಳಲಾಗಿದೆ’ ಎಂದರು.</p>.<p>‘ನಿರ್ಮಿತಿ ಕೇಂದ್ರದವರು ಸರಿಯಾಗಿ ಕೆಲಸ ಮಾಡುವುದಿಲ್ಲ. ಅವರ ಕಾಮಗಾರಿಯ ಗುಣಮಟ್ಟ ಕಳಪೆಯಾಗಿರುತ್ತದೆ. ನಿರ್ಮಿತಿ ಕೇಂದ್ರದ ನಿರ್ದೇಶಕ ನಾರಾಯಣಗೌಡರು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವುದಿಲ್ಲ. ಹೀಗಾಗಿ ನಿರ್ಮಿತಿ ಕೇಂದ್ರಕ್ಕೆ ಅಂಬೇಡ್ಕರ್ ಭವನಗಳ ಕಾಮಗಾರಿ ಕೊಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಅಪರೂಪಕ್ಕೆ ಅಂಬೇಡ್ಕರ್ ಭವನಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಭವನಗಳು ಹೆಚ್ಚು ಕಾಲ ಉಳಿಯಬೇಕು. ಪ್ರತಿ ಘಟಕಕ್ಕೆ ಸರ್ಕಾರ ನೀಡಿರುವ ₹ 12 ಲಕ್ಷದ ಜತೆಗೆ ಗ್ರಾಮದ ಜನರು ಮತ್ತಷ್ಟು ಹಣ ಹಾಕಿ ಉತ್ತಮವಾಗಿ ಭವನ ನಿರ್ಮಿಸಿಕೊಳ್ಳಲು ಅವಕಾಶವಿದೆ. ಆದ ಕಾರಣ ದಲಿತ ಸಮುದಾಯದ ಗುತ್ತಿಗೆದಾರರಿಗೆ ಭವನದ ಕಾಮಗಾರಿ ನೀಡುವುದು ಸೂಕ್ತ’ ಎಂದು ಅಭಿಪ್ರಾಯಪಟ್ಟರು.</p>.<p>‘ಭವನಗಳಿಗೆ ಬಿಡುಗಡೆಯಾಗಿರುವ ಅನುದಾನ ಸದ್ಬಳಕೆಯಾಗಬೇಕು. ನಿರ್ಮಿತಿ ಕೇಂದ್ರಕ್ಕೆ ನೀಡಿರುವ ಭವನಗಳ ಕಾಮಗಾರಿಯ ಗುತ್ತಿಗೆಯನ್ನು ಜಿಲ್ಲಾಧಿಕಾರಿಯು ಹಿಂಪಡೆಯಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಗುಡುಗಿದರು.</p>.<p><strong>ಅಕ್ರಮ ಗಣಿಗಾರಿಕೆ:</strong> ‘ತಾಲ್ಲೂಕಿನ ಹಲವೆಡೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಗಣಿಗಾರಿಕೆ ಸ್ಥಳದಲ್ಲಿ ಜಿಲೆಟಿನ್ ಕಡ್ಡಿಗಳ ಸ್ಫೋಟಗಳು ದೊಡ್ಡ ಅನಾಹುತ ನಡೆದಿದೆ. ತಾಲ್ಲೂಕಿನ ಕ್ವಾರಿಗಳಲ್ಲೂ ಅಂತಹ ದುರ್ಘಟನೆ ನಡೆಯುವ ಸಾಧ್ಯತೆಯಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನ ತಲಗುಂದ, ನರಸಾಪುರ ಸುತ್ತಮುತ್ತ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ದೊಡ್ಡ ಶ್ರೀಮಂತರು ಪರವಾನಗಿ ಇಲ್ಲದೆ ಕ್ವಾರಿ ನಡೆಸುತ್ತಿದ್ದಾರೆ. ಸಂಸದ ಎಸ್.ಮುನಿಸ್ವಾಮಿ ಅವರು ಸಹ ಹಲವು ಬಾರಿ ಈ ಸಂಗತಿ ಪ್ರಸ್ತಾಪಿಸಿದ್ದಾರೆ. ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಈ ಅಕ್ರಮ ತಡೆಯಲು ವಿಫಲವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>