<p><strong>ಕೋಲಾರ: </strong>‘ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ಹಾಗೂ ಮಾಲೂರು ತಾಲ್ಲೂಕು ಹಾಲು ಒಕ್ಕೂಟದ<br />ವ್ಯವಸ್ಥಾಪಕರ ದುರಾಡಳಿತ ಖಂಡಿಸಿ ಸಂಘಟನೆ ವತಿಯಿಂದ ಹಾಲು ಉತ್ಪಾದಕರೊಂದಿಗೆ ಪ್ರತಿಭಟನೆ ಮಾಡುತ್ತೇವೆ’ ಎಂದು ಕರ್ನಾಟಕ ರೈತ ಸೇನೆ ಅಧ್ಯಕ್ಷ ಎಂ.ಆರ್.ನಾರಾಯಣಗೌಡ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ಕೋಚಿಮುಲ್) ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ಸರ್ಕಾರ ಉನ್ನತ ತನಿಖೆ ನಡೆಸಬೇಕು. ಹಾಲು ಒಕ್ಕೂಟ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಮಾಲೂರು ತಾಲೂಕಿನಲ್ಲಿ ಕೋಚಿಮುಲ್ ಶಿಬಿರ ಕಚೇರಿಯನ್ನು ₹ 58 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಸೂರ್ಯ ಕ್ರಿಯೇಟರ್ಸ್ ಕಂಪನಿಗೆ ಟೆಂಡರ್ ನೀಡಲಾಗಿತ್ತು. ಶಿಬಿರ ಕಚೇರಿಯು 2 ಅಂತಸ್ತಿನ ಕಟ್ಟಡವಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ₹ 50 ಲಕ್ಷ ದೇಣಿಗೆ ಪಡೆದು ಈ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡಕ್ಕೆ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆಯಾಗಿದೆ’ ಎಂದು ಆರೋಪಿಸಿದರು.</p>.<p>‘ಶಿಬಿರ ಕಚೇರಿಯ 4ನೇ ಅಂತಸ್ತನ್ನು ತಮ್ಮ ಸ್ವಂತ ಹಣದಲ್ಲಿ ನಿರ್ಮಿಸಿರುವುದಾಗಿ ನಂಜೇಗೌಡರು ನಾಮಫಲಕ ಹಾಕಿಸಿಕೊಂಡಿದ್ದಾರೆ. ಕಚೇರಿಯಲ್ಲಿನ ಪಾರ್ಟಿಶಿಯನ್ ಕೆಲಸಕ್ಕೆ ಟೆಂಡರ್ ಕರೆಯದೆ ತಮ್ಮ ಹಿಂಬಾಲಕರಿಗೆ ₹ 5 ಲಕ್ಷದ ಗುತ್ತಿಗೆ ನೀಡಿ ಸುಮಾರು ₹ 10 ಲಕ್ಷದ ಕಾಮಗಾರಿ ಮಾಡಿಸಿದ್ದಾರೆ. ಕೋಚಿಮುಲ್ ಹಣದಲ್ಲಿ ತಮ್ಮ ಕೊಠಡಿಯನ್ನು ಐಷಾರಾಮಿಯಾಗಿ ನಿರ್ಮಿಸಿಕೊಂಡಿದ್ದಾರೆ’ ಎಂದು ದೂರಿದರು.</p>.<p>‘ಶಿಬಿರ ಕಚೇರಿಯ ಪಕ್ಕದಲ್ಲಿ ₹ 35 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರಿಗಾಗಿ ಉದ್ಯಾನ ನಿರ್ಮಿಸಿ ಹಾಲು ಉತ್ಪಾದಕರ ಹಣವನ್ನು ದುಂದು ವೆಚ್ಚ ಮಾಡಿದ್ದಾರೆ. ನಂಜೇಗೌಡರು ಶಿಬಿರ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯಾಗಿ ಮಾಡಿಕೊಂಡು ಸಭೆ ಸಮಾರಂಭ ನಡೆಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಸಂಘಟನೆ ಸದಸ್ಯರಾದ ಆನಂದ್, ಶ್ರೀಧರ್, ಮಂಜುನಾಥ್, ಸಿ.ವಿ.ಪ್ರಭಾಕರಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ಹಾಗೂ ಮಾಲೂರು ತಾಲ್ಲೂಕು ಹಾಲು ಒಕ್ಕೂಟದ<br />ವ್ಯವಸ್ಥಾಪಕರ ದುರಾಡಳಿತ ಖಂಡಿಸಿ ಸಂಘಟನೆ ವತಿಯಿಂದ ಹಾಲು ಉತ್ಪಾದಕರೊಂದಿಗೆ ಪ್ರತಿಭಟನೆ ಮಾಡುತ್ತೇವೆ’ ಎಂದು ಕರ್ನಾಟಕ ರೈತ ಸೇನೆ ಅಧ್ಯಕ್ಷ ಎಂ.ಆರ್.ನಾರಾಯಣಗೌಡ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ಕೋಚಿಮುಲ್) ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ಸರ್ಕಾರ ಉನ್ನತ ತನಿಖೆ ನಡೆಸಬೇಕು. ಹಾಲು ಒಕ್ಕೂಟ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಮಾಲೂರು ತಾಲೂಕಿನಲ್ಲಿ ಕೋಚಿಮುಲ್ ಶಿಬಿರ ಕಚೇರಿಯನ್ನು ₹ 58 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಸೂರ್ಯ ಕ್ರಿಯೇಟರ್ಸ್ ಕಂಪನಿಗೆ ಟೆಂಡರ್ ನೀಡಲಾಗಿತ್ತು. ಶಿಬಿರ ಕಚೇರಿಯು 2 ಅಂತಸ್ತಿನ ಕಟ್ಟಡವಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ₹ 50 ಲಕ್ಷ ದೇಣಿಗೆ ಪಡೆದು ಈ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡಕ್ಕೆ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆಯಾಗಿದೆ’ ಎಂದು ಆರೋಪಿಸಿದರು.</p>.<p>‘ಶಿಬಿರ ಕಚೇರಿಯ 4ನೇ ಅಂತಸ್ತನ್ನು ತಮ್ಮ ಸ್ವಂತ ಹಣದಲ್ಲಿ ನಿರ್ಮಿಸಿರುವುದಾಗಿ ನಂಜೇಗೌಡರು ನಾಮಫಲಕ ಹಾಕಿಸಿಕೊಂಡಿದ್ದಾರೆ. ಕಚೇರಿಯಲ್ಲಿನ ಪಾರ್ಟಿಶಿಯನ್ ಕೆಲಸಕ್ಕೆ ಟೆಂಡರ್ ಕರೆಯದೆ ತಮ್ಮ ಹಿಂಬಾಲಕರಿಗೆ ₹ 5 ಲಕ್ಷದ ಗುತ್ತಿಗೆ ನೀಡಿ ಸುಮಾರು ₹ 10 ಲಕ್ಷದ ಕಾಮಗಾರಿ ಮಾಡಿಸಿದ್ದಾರೆ. ಕೋಚಿಮುಲ್ ಹಣದಲ್ಲಿ ತಮ್ಮ ಕೊಠಡಿಯನ್ನು ಐಷಾರಾಮಿಯಾಗಿ ನಿರ್ಮಿಸಿಕೊಂಡಿದ್ದಾರೆ’ ಎಂದು ದೂರಿದರು.</p>.<p>‘ಶಿಬಿರ ಕಚೇರಿಯ ಪಕ್ಕದಲ್ಲಿ ₹ 35 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರಿಗಾಗಿ ಉದ್ಯಾನ ನಿರ್ಮಿಸಿ ಹಾಲು ಉತ್ಪಾದಕರ ಹಣವನ್ನು ದುಂದು ವೆಚ್ಚ ಮಾಡಿದ್ದಾರೆ. ನಂಜೇಗೌಡರು ಶಿಬಿರ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯಾಗಿ ಮಾಡಿಕೊಂಡು ಸಭೆ ಸಮಾರಂಭ ನಡೆಸುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>ಸಂಘಟನೆ ಸದಸ್ಯರಾದ ಆನಂದ್, ಶ್ರೀಧರ್, ಮಂಜುನಾಥ್, ಸಿ.ವಿ.ಪ್ರಭಾಕರಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>