<p><strong>ಬಂಗಾರಪೇಟೆ:</strong> ರೈತರ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕೆ.ಎಸ್. ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಸ್ಕಾಂ ಎಇಇ ರಾಮಕೃಷ್ಣಪ್ಪಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಬೆಸ್ಕಾಂ ಅಧಿಕಾರಿಗಳು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನೆಪಮಾತ್ರಕ್ಕೆ 4 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಹಲವು ಬಾರಿ ವಿದ್ಯುತ್ ಕಡಿತ ಆಗುತ್ತಿದೆ. ಇದರ ಪರಿಣಾಮ ರೈತರ ಪಂಪ್ಸೆಟ್ ಮೋಟಾರ್ ಹಾಗೂ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗುತ್ತಿವೆ ಎಂದು ದೂರಿದರು.</p>.<p>ರೈತರು ಎರಡು ವರ್ಷದಿಂದ ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆ ಬೆಳೆಯಲಾಗದೆ ಮತ್ತೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್ ಮಾತನಾಡಿ, ಇನ್ನಾದರೂ ಹಗಲಿನಲ್ಲಿ ನಾಲ್ಕು ತಾಸು, ರಾತ್ರಿ ವೇಳೆ 3 ತಾಸು ವಿದ್ಯುತ್ ಪೂರೈಕೆ ಮಾಡಬೇಕು. ಒಂದು ವಾರದಲ್ಲಿ ಸಮಸ್ಯೆ ನೀಗಿಸದಿದ್ದರೆ ಜಾನುವಾರುಗಳೊಂದಿಗೆ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಮುಖಂಡರಾದ ಬೃಹಾನುದ್ದೀನ್, ಗ್ರಾ.ಪಂ. ಸದಸ್ಯ ಕಾರಹಳ್ಳಿ ನಾರಾಯಣಸ್ವಾಮಿ, ಕಾರಹಳ್ಳಿ ಶ್ರೀನಿವಾಸ್, ನಾಯಕರಹಳ್ಳಿ ಮಂಜು ನಾಥ್, ಕಾಮಾಂಡಹಳ್ಳಿ ಎಸ್. ನಾರಾಯಣಗೌಡ, ವೇಣು ಗೊಪಾಲ ಪುರ ಮಂಜುನಾಥ್, ಮುಜಾಮಿಲ್, ಬಾವರಹಳ್ಳಿ ಕೃಷ್ಣಪ್ಪ, ಐತಾಂಡಹಳ್ಳಿ ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ರೈತರ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕೆ.ಎಸ್. ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಸ್ಕಾಂ ಎಇಇ ರಾಮಕೃಷ್ಣಪ್ಪಗೆ ಮನವಿ ಸಲ್ಲಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಬೆಸ್ಕಾಂ ಅಧಿಕಾರಿಗಳು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನೆಪಮಾತ್ರಕ್ಕೆ 4 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಹಲವು ಬಾರಿ ವಿದ್ಯುತ್ ಕಡಿತ ಆಗುತ್ತಿದೆ. ಇದರ ಪರಿಣಾಮ ರೈತರ ಪಂಪ್ಸೆಟ್ ಮೋಟಾರ್ ಹಾಗೂ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗುತ್ತಿವೆ ಎಂದು ದೂರಿದರು.</p>.<p>ರೈತರು ಎರಡು ವರ್ಷದಿಂದ ಕೋವಿಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆ ಬೆಳೆಯಲಾಗದೆ ಮತ್ತೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್ ಮಾತನಾಡಿ, ಇನ್ನಾದರೂ ಹಗಲಿನಲ್ಲಿ ನಾಲ್ಕು ತಾಸು, ರಾತ್ರಿ ವೇಳೆ 3 ತಾಸು ವಿದ್ಯುತ್ ಪೂರೈಕೆ ಮಾಡಬೇಕು. ಒಂದು ವಾರದಲ್ಲಿ ಸಮಸ್ಯೆ ನೀಗಿಸದಿದ್ದರೆ ಜಾನುವಾರುಗಳೊಂದಿಗೆ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಮುಖಂಡರಾದ ಬೃಹಾನುದ್ದೀನ್, ಗ್ರಾ.ಪಂ. ಸದಸ್ಯ ಕಾರಹಳ್ಳಿ ನಾರಾಯಣಸ್ವಾಮಿ, ಕಾರಹಳ್ಳಿ ಶ್ರೀನಿವಾಸ್, ನಾಯಕರಹಳ್ಳಿ ಮಂಜು ನಾಥ್, ಕಾಮಾಂಡಹಳ್ಳಿ ಎಸ್. ನಾರಾಯಣಗೌಡ, ವೇಣು ಗೊಪಾಲ ಪುರ ಮಂಜುನಾಥ್, ಮುಜಾಮಿಲ್, ಬಾವರಹಳ್ಳಿ ಕೃಷ್ಣಪ್ಪ, ಐತಾಂಡಹಳ್ಳಿ ಮುನಿಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>