<p><strong>ಕೋಲಾರ: </strong>‘2021ರ ಜನಗಣತಿಗೆ ಪಾರದರ್ಶಕ ಮಾಹಿತಿ ನೀಡಿ’ ಎಂದು ಜಿಲ್ಲಾ ಚುನಾವಣಾ ಶಾಖೆ ನೋಡಲ್ ಅಧಿಕಾರಿ ಎ.ಜಿ.ಪಂಕಜಾ ತಿಳಿಸಿದರು.</p>.<p>ಜಿಲ್ಲೆ, ತಾಲ್ಲೂಕು, ನಗರ ಹಾಗೂ ಪಟ್ಟಣ ಪ್ರದೇಶದ ಜನಗಣತಿ ಅಧಿಕಾರಿಗಳಿಗೆ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಏ.15ರಿಂದ ಮೇ 29ರವರೆಗೆ ಒಟ್ಟು 45 ದಿನಗಳ ಕಾಲ ಜನಗಣತಿ ನಡೆಯಲಿದೆ’ ಎಂದು ಹೇಳಿದರು.</p>.<p>‘ಈ ಬಾರಿ ಮೊಬೈಲ್ ಆ್ಯಪ್ ಮೂಲಕ ಜನಗಣತಿ ನಡೆಯುತ್ತದೆ. ಹಿಂದಿನ ಬಾರಿ ಕಾಗದದ ಮುಖಾಂತರ ಸುಮಾರು 6 ತಿಂಗಳ ಕಾಲ ಜನಗಣತಿ ನಡೆಸಲಾಗಿತ್ತು. ಆದರೆ, ಈ ಬಾರಿ ಮೊಬೈಲ್ ಆ್ಯಪ್ ಮೂಲಕ -3 ತಿಂಗಳೊಳಗೆ ಜನಗಣತಿ ಕಾರ್ಯ ಪೂರ್ಣಗೊಳಿಸುತ್ತೇವೆ. ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೋಪ್ಯವಾಗಿ ಇಡುತ್ತೇವೆ’ ಎಂದು ಮಾಹಿತಿ ನೀಡಿದರು.</p>.<p>‘ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ನಗರ ಮಟ್ಟದಲ್ಲಿ ಆಯುಕ್ತರು ಜನಗಣತಿ ಪ್ರಕ್ರಿಯೆಯ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಜನಗಣತಿಗೆ ಈಗಾಗಲೇ ಗಣತಿದಾರರನ್ನು ನೇಮಕ ಮಾಡಿದ್ದು, ಸದ್ಯದಲ್ಲೇ ಅವರಿಗೆ ಗುರುತಿನಚೀಟಿ ವಿತರಿಸುತ್ತೇವೆ’ ಎಂದು ವಿವರಿಸಿದರು.</p>.<p>ಚುನಾವಣಾ ಇಲಾಖೆ ಬೆಂಗಳೂರು ವಿಭಾಗದ ಉಪ ನಿರ್ದೇಶಕ ಚಿನ್ನದೊರೈ, ತರಬೇತುದಾರರಾದ ಮಾಜುದ್ದೀನ್ ಖಾನ್ ಮತ್ತು ಜಹೀರ್ ಅಬ್ಬಾಸ್ ಅವರು ಜನಗಣತಿ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಆರ್.ಶೋಬಿತಾ, ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘2021ರ ಜನಗಣತಿಗೆ ಪಾರದರ್ಶಕ ಮಾಹಿತಿ ನೀಡಿ’ ಎಂದು ಜಿಲ್ಲಾ ಚುನಾವಣಾ ಶಾಖೆ ನೋಡಲ್ ಅಧಿಕಾರಿ ಎ.ಜಿ.ಪಂಕಜಾ ತಿಳಿಸಿದರು.</p>.<p>ಜಿಲ್ಲೆ, ತಾಲ್ಲೂಕು, ನಗರ ಹಾಗೂ ಪಟ್ಟಣ ಪ್ರದೇಶದ ಜನಗಣತಿ ಅಧಿಕಾರಿಗಳಿಗೆ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಏ.15ರಿಂದ ಮೇ 29ರವರೆಗೆ ಒಟ್ಟು 45 ದಿನಗಳ ಕಾಲ ಜನಗಣತಿ ನಡೆಯಲಿದೆ’ ಎಂದು ಹೇಳಿದರು.</p>.<p>‘ಈ ಬಾರಿ ಮೊಬೈಲ್ ಆ್ಯಪ್ ಮೂಲಕ ಜನಗಣತಿ ನಡೆಯುತ್ತದೆ. ಹಿಂದಿನ ಬಾರಿ ಕಾಗದದ ಮುಖಾಂತರ ಸುಮಾರು 6 ತಿಂಗಳ ಕಾಲ ಜನಗಣತಿ ನಡೆಸಲಾಗಿತ್ತು. ಆದರೆ, ಈ ಬಾರಿ ಮೊಬೈಲ್ ಆ್ಯಪ್ ಮೂಲಕ -3 ತಿಂಗಳೊಳಗೆ ಜನಗಣತಿ ಕಾರ್ಯ ಪೂರ್ಣಗೊಳಿಸುತ್ತೇವೆ. ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೋಪ್ಯವಾಗಿ ಇಡುತ್ತೇವೆ’ ಎಂದು ಮಾಹಿತಿ ನೀಡಿದರು.</p>.<p>‘ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ನಗರ ಮಟ್ಟದಲ್ಲಿ ಆಯುಕ್ತರು ಜನಗಣತಿ ಪ್ರಕ್ರಿಯೆಯ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಜನಗಣತಿಗೆ ಈಗಾಗಲೇ ಗಣತಿದಾರರನ್ನು ನೇಮಕ ಮಾಡಿದ್ದು, ಸದ್ಯದಲ್ಲೇ ಅವರಿಗೆ ಗುರುತಿನಚೀಟಿ ವಿತರಿಸುತ್ತೇವೆ’ ಎಂದು ವಿವರಿಸಿದರು.</p>.<p>ಚುನಾವಣಾ ಇಲಾಖೆ ಬೆಂಗಳೂರು ವಿಭಾಗದ ಉಪ ನಿರ್ದೇಶಕ ಚಿನ್ನದೊರೈ, ತರಬೇತುದಾರರಾದ ಮಾಜುದ್ದೀನ್ ಖಾನ್ ಮತ್ತು ಜಹೀರ್ ಅಬ್ಬಾಸ್ ಅವರು ಜನಗಣತಿ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಆರ್.ಶೋಬಿತಾ, ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>