<p><strong>ಬೇತಮಂಗಲ</strong>: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇತಮಂಗಲ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ನಿರ್ಮೂಲನೆ ಹಾಗೂ ಪೋಕ್ಸೊ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬೇತಮಂಗಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಚಿಂತಕಲ್ ಮಾತನಾಡಿ, ಇಂದಿನ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಸಣ್ಣ ಕುತೂಹಲಕ್ಕೆ ಶುರುವಾಗುವ ಕೆಟ್ಟ ಹವ್ಯಾಸಗಳು ಇಡೀ ಭವಿಷ್ಯವನ್ನೇ ನಾಶ ಮಾಡುತ್ತವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ನಡವಳಿಕೆಯ ಮೇಲೆ ನಿಗಾವಹಿಸಬೇಕು ಎಂದು ಹೇಳಿದರು.</p>.<p>ಅಪ್ರಾಪ್ತರ ಮೇಲೆ ನಡೆಯುವ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳನ್ನು ಮಕ್ಕಳು ಮುಚ್ಚಿಡಬಾರದು. ನಿರ್ಭಯವಾಗಿ ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು ಅಥವಾ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಾಲ್ಯ ವಿವಾಹವು ಕಾನೂನುಬಾಹಿರ. ಇಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ಎಂದು ಮಾಹಿತಿ ನೀಡಿದರು.</p>.<p>ಮುಖ್ಯೋಪಾಧ್ಯಾಯೆ ಎಂ.ವಿ.ಭಾರತಿ, ಶಿಕ್ಷಕರಾದ ರವಿ, ಗಂಗಾಧರ್, ವುಲಿಗಮ್ಮ ಹಾಗೂ ಶಾಲಾ ಶಿಕ್ಷಕ ವೃಂದ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>
<p><strong>ಬೇತಮಂಗಲ</strong>: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇತಮಂಗಲ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ನಿರ್ಮೂಲನೆ ಹಾಗೂ ಪೋಕ್ಸೊ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬೇತಮಂಗಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಚಿಂತಕಲ್ ಮಾತನಾಡಿ, ಇಂದಿನ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಸಣ್ಣ ಕುತೂಹಲಕ್ಕೆ ಶುರುವಾಗುವ ಕೆಟ್ಟ ಹವ್ಯಾಸಗಳು ಇಡೀ ಭವಿಷ್ಯವನ್ನೇ ನಾಶ ಮಾಡುತ್ತವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ನಡವಳಿಕೆಯ ಮೇಲೆ ನಿಗಾವಹಿಸಬೇಕು ಎಂದು ಹೇಳಿದರು.</p>.<p>ಅಪ್ರಾಪ್ತರ ಮೇಲೆ ನಡೆಯುವ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳನ್ನು ಮಕ್ಕಳು ಮುಚ್ಚಿಡಬಾರದು. ನಿರ್ಭಯವಾಗಿ ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು ಅಥವಾ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಾಲ್ಯ ವಿವಾಹವು ಕಾನೂನುಬಾಹಿರ. ಇಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ಎಂದು ಮಾಹಿತಿ ನೀಡಿದರು.</p>.<p>ಮುಖ್ಯೋಪಾಧ್ಯಾಯೆ ಎಂ.ವಿ.ಭಾರತಿ, ಶಿಕ್ಷಕರಾದ ರವಿ, ಗಂಗಾಧರ್, ವುಲಿಗಮ್ಮ ಹಾಗೂ ಶಾಲಾ ಶಿಕ್ಷಕ ವೃಂದ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>