<p><strong>ಬೇತಮಂಗಲ</strong>: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇತಮಂಗಲ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ನಿರ್ಮೂಲನೆ ಹಾಗೂ ಪೋಕ್ಸೊ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬೇತಮಂಗಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಚಿಂತಕಲ್ ಮಾತನಾಡಿ, ಇಂದಿನ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಸಣ್ಣ ಕುತೂಹಲಕ್ಕೆ ಶುರುವಾಗುವ ಕೆಟ್ಟ ಹವ್ಯಾಸಗಳು ಇಡೀ ಭವಿಷ್ಯವನ್ನೇ ನಾಶ ಮಾಡುತ್ತವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ನಡವಳಿಕೆಯ ಮೇಲೆ ನಿಗಾವಹಿಸಬೇಕು ಎಂದು ಹೇಳಿದರು.</p>.<p>ಅಪ್ರಾಪ್ತರ ಮೇಲೆ ನಡೆಯುವ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳನ್ನು ಮಕ್ಕಳು ಮುಚ್ಚಿಡಬಾರದು. ನಿರ್ಭಯವಾಗಿ ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು ಅಥವಾ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಾಲ್ಯ ವಿವಾಹವು ಕಾನೂನುಬಾಹಿರ. ಇಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ಎಂದು ಮಾಹಿತಿ ನೀಡಿದರು.</p>.<p>ಮುಖ್ಯೋಪಾಧ್ಯಾಯೆ ಎಂ.ವಿ.ಭಾರತಿ, ಶಿಕ್ಷಕರಾದ ರವಿ, ಗಂಗಾಧರ್, ವುಲಿಗಮ್ಮ ಹಾಗೂ ಶಾಲಾ ಶಿಕ್ಷಕ ವೃಂದ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೇತಮಂಗಲ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ನಿರ್ಮೂಲನೆ ಹಾಗೂ ಪೋಕ್ಸೊ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬೇತಮಂಗಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುರುರಾಜ್ ಚಿಂತಕಲ್ ಮಾತನಾಡಿ, ಇಂದಿನ ಯುವ ಜನತೆ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಸಣ್ಣ ಕುತೂಹಲಕ್ಕೆ ಶುರುವಾಗುವ ಕೆಟ್ಟ ಹವ್ಯಾಸಗಳು ಇಡೀ ಭವಿಷ್ಯವನ್ನೇ ನಾಶ ಮಾಡುತ್ತವೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳ ನಡವಳಿಕೆಯ ಮೇಲೆ ನಿಗಾವಹಿಸಬೇಕು ಎಂದು ಹೇಳಿದರು.</p>.<p>ಅಪ್ರಾಪ್ತರ ಮೇಲೆ ನಡೆಯುವ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳನ್ನು ಮಕ್ಕಳು ಮುಚ್ಚಿಡಬಾರದು. ನಿರ್ಭಯವಾಗಿ ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು ಅಥವಾ ಪೊಲೀಸ್ ಇಲಾಖೆಯ ಸಹಾಯ ಪಡೆಯಬೇಕು. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಬಾಲ್ಯ ವಿವಾಹವು ಕಾನೂನುಬಾಹಿರ. ಇಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ಎಂದು ಮಾಹಿತಿ ನೀಡಿದರು.</p>.<p>ಮುಖ್ಯೋಪಾಧ್ಯಾಯೆ ಎಂ.ವಿ.ಭಾರತಿ, ಶಿಕ್ಷಕರಾದ ರವಿ, ಗಂಗಾಧರ್, ವುಲಿಗಮ್ಮ ಹಾಗೂ ಶಾಲಾ ಶಿಕ್ಷಕ ವೃಂದ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>