ರಹಮತ್ನಗರ ಹಿಂದೂ ರುದ್ರಭೂಮಿಯಲ್ಲಿ ಹೊಸದಾಗಿ ನಿರ್ಮಿಸಿರುವ ವಿದ್ಯುತ್ ಚಿತಾಗಾರ ಪರಿಶೀಲಿಸಿದ ಜಿಲ್ಲಾಧಿಕಾರಿ, ‘ಚಿತಾಗಾರದಲ್ಲಿನ ಬಾಕಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಿ ನಗರಸಭೆ ಸುಪರ್ದಿಗೆ ತೆಗೆದುಕೊಳ್ಳಿ’ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ಅವರಿಗೆ ಸೂಚನೆ ನೀಡಿದರು. ವಾಲ್ಮೀಕಿ ಭವನ ಕಾಮಗಾರಿ ಪರಿಶೀಲಿಸಿ 15 ದಿನದೊಳಗೆ ಭವನ ಉದ್ಘಾಟಿಸಬೇಕು ಎಂದು ತಿಳಿಸಿದರು.