ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳ ಕೊಲೆಯಲ್ಲಿ ಅಂತ್ಯ

Last Updated 9 ಜೂನ್ 2020, 15:47 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಪಾನಮತ್ತ ಸ್ನೇಹಿತರ ನಡುವೆ ಸೋಮವಾರ ರಾತ್ರಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕುರ್ಕಿ ಗ್ರಾಮದ ಮುನಿಯಪ್ಪ (60) ಎಂಬುವರು ಕೊಲೆಯಾಗಿದ್ದು, ಅವರ ಸ್ನೇಹಿತ ಆರೋಪಿ ಕೃಷ್ಣಪ್ಪನನ್ನು ವೇಮಗಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮದ್ಯವ್ಯಸನಿಗಳಾದ ಇವರಿಬ್ಬರೂ ರಾತ್ರಿ ಮದ್ಯಪಾನ ಮಾಡಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಾಲಯದ ಬಳಿ ಜಗಳವಾಡಿದ್ದಾರೆ. ನಂತರ ಜಗಳ ವಿಕೋಪಕ್ಕೆ ತಿರುಗಿ ಆರೋಪಿಯು ಮುನಿಯಪ್ಪನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿದ್ದರಿಂದ ಮುನಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT