<p><strong>ಕೋಲಾರ:</strong> ‘ಇಷ್ಟು ದಿನ ರಾಮನ ಮೇಲೆ ಇದ್ದ ಕೋಪವನ್ನು ಸಿದ್ದರಾಮಯ್ಯ ಈಗ ಹನುಮನ ಮೇಲೆ ತೋರಿಸುತ್ತಿದ್ದಾರೆ. ಮಂಡ್ಯದಲ್ಲಿ ಹನುಮಧ್ವಜ ಹಾರಿಸಲು ಬಿಡುತ್ತಿಲ್ಲ. ಕಳ್ಳರ ರೀತಿ ಪೊಲೀಸರಿಂದ ತೆರವುಗೊಳಿಸಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಲ್ಲಿನ ಜನರೇ ದುಡ್ಡು ಹಾಕಿ ಧ್ವಜ ಸ್ತಂಭ ಸ್ಥಾಪಿಸಿದ್ದಾರೆ. ಹನುಮಧ್ವಜ ಹಾರಿಸಲು ಮೂರು ತಿಂಗಳದ ಹಿಂದೆ ಪಂಚಾಯಿತಿಯ ಅನುಮತಿ ಕೂಡ ಪಡೆದಿದ್ದಾರೆ. ಆದರೆ, ಸಿದ್ದರಾಮಯ್ಯ ಯಾವುದೋ ದಾಖಲೆ ನೀಡುತ್ತಿದ್ದಾರೆ’ ಎಂದರು.</p>.<p>‘ಜನರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸುತ್ತೇನೆ. ಹನುಮಧ್ವಜ ಕೀಳಲು ನಿಮಗೆ ಯಾವ ಅಧಿಕಾರವಿದೆ, ಯಾವಾಗ ರಾಷ್ಟ್ರಧ್ವಜ ಹಾರಿಸಬೇಕು ಎಂಬುದು ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಹನುಮಧ್ವಜ ಕಿತ್ತು ಬಿಸಾಕಿರುವ ಕಾಂಗ್ರೆಸ್ನವರಿಗೆ ಖಂಡಿತ ಶಾಪ ತಟ್ಟಲಿದೆ. ಜನರೇ ತಕ್ಕ ಪಾಠ ಕಲಿಸುವ ಕಾಲ ಹತ್ತಿರದಲ್ಲೇ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಇಷ್ಟು ದಿನ ರಾಮನ ಮೇಲೆ ಇದ್ದ ಕೋಪವನ್ನು ಸಿದ್ದರಾಮಯ್ಯ ಈಗ ಹನುಮನ ಮೇಲೆ ತೋರಿಸುತ್ತಿದ್ದಾರೆ. ಮಂಡ್ಯದಲ್ಲಿ ಹನುಮಧ್ವಜ ಹಾರಿಸಲು ಬಿಡುತ್ತಿಲ್ಲ. ಕಳ್ಳರ ರೀತಿ ಪೊಲೀಸರಿಂದ ತೆರವುಗೊಳಿಸಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಲ್ಲಿನ ಜನರೇ ದುಡ್ಡು ಹಾಕಿ ಧ್ವಜ ಸ್ತಂಭ ಸ್ಥಾಪಿಸಿದ್ದಾರೆ. ಹನುಮಧ್ವಜ ಹಾರಿಸಲು ಮೂರು ತಿಂಗಳದ ಹಿಂದೆ ಪಂಚಾಯಿತಿಯ ಅನುಮತಿ ಕೂಡ ಪಡೆದಿದ್ದಾರೆ. ಆದರೆ, ಸಿದ್ದರಾಮಯ್ಯ ಯಾವುದೋ ದಾಖಲೆ ನೀಡುತ್ತಿದ್ದಾರೆ’ ಎಂದರು.</p>.<p>‘ಜನರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸುತ್ತೇನೆ. ಹನುಮಧ್ವಜ ಕೀಳಲು ನಿಮಗೆ ಯಾವ ಅಧಿಕಾರವಿದೆ, ಯಾವಾಗ ರಾಷ್ಟ್ರಧ್ವಜ ಹಾರಿಸಬೇಕು ಎಂಬುದು ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಹನುಮಧ್ವಜ ಕಿತ್ತು ಬಿಸಾಕಿರುವ ಕಾಂಗ್ರೆಸ್ನವರಿಗೆ ಖಂಡಿತ ಶಾಪ ತಟ್ಟಲಿದೆ. ಜನರೇ ತಕ್ಕ ಪಾಠ ಕಲಿಸುವ ಕಾಲ ಹತ್ತಿರದಲ್ಲೇ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>