<p><strong>ಮಾಲೂರು</strong>: ನಗರದಲ್ಲಿ ನಮ್ಮ ಕನ್ನಡ ಸೇನೆ ಸಂಘಟನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಗಿ ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಕಡತೂರು ಗ್ರಾಮದ ಗುರುಪ್ಪಶೆಟ್ಟಿ (65) 11 ಮುದ್ದೆ ತಿನ್ನುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ.</p>.<p>ನಿಗದಿತ ಸಮಯದಲ್ಲಿ ರಾಗಿ ಮುದ್ದೆ ಮತ್ತು ಕೋಳಿ ಸಾರು ತಿನ್ನುವ ಸ್ಪರ್ಧೆಯಲ್ಲಿ 9 ಮಂದಿ ಭಾಗವಹಿಸಿದ್ದರು. ಇದರಲ್ಲಿ ಗುರುಪ್ಪಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ. ಕಡತೂರು ಗ್ರಾಮದ ಕೃಷ್ಣಪ್ಪ ಶೆಟ್ಟಿ 9 ಮುದ್ದೆ ತಿನ್ನುವ ಮೂಲಕ ದ್ವಿತೀಯ ಸ್ಥಾನ ಪಡೆದು ₹5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಪಡೆದಿದ್ದಾರೆ. ತಲಾ 7 ಮುದ್ದೆ ತಿನ್ನುವ ಮೂಲಕ ನಾಗೇಶ್ ಹಾಗೂ ಅಂಬರೀಶ್ ಮೂರನೇ ಸ್ಥಾನ ಪಡೆದು ₹1.5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ತನ್ನದಾಗಿಸಿಕೊಂಡಿದ್ದಾರೆ.</p>.<p>ಮಾಜಿ ಶಾಸಕ ಎ.ನಾಗರಾಜು, ಕೆ.ಎಸ್.ಮಂಜುನಾಥ ಗೌಡ, ರಾಜ್ಯಾಧ್ಯಕ್ಷ ಬಸವರಾಜ್ ಪಡಕೋಟೆ, ಎಂ.ವಿ.ಹನುಮಂತಪ್ಪ, ಚಾಕನಹಳ್ಳಿ ನಾಗರಾಜ್, ಆಟೊ ಶ್ರೀನಿವಾಸ್, ಕೋಡುರು ಗೋಪಾಲ್, ರವಿ, ಜಗದೀಶ್, ಅಶೋಕ್ ಕುಮಾರ್, ಚನ್ನಕೃಷ್ಣ, ಎಸ್.ಎಂ.ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ನಗರದಲ್ಲಿ ನಮ್ಮ ಕನ್ನಡ ಸೇನೆ ಸಂಘಟನೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಗಿ ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಕಡತೂರು ಗ್ರಾಮದ ಗುರುಪ್ಪಶೆಟ್ಟಿ (65) 11 ಮುದ್ದೆ ತಿನ್ನುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ.</p>.<p>ನಿಗದಿತ ಸಮಯದಲ್ಲಿ ರಾಗಿ ಮುದ್ದೆ ಮತ್ತು ಕೋಳಿ ಸಾರು ತಿನ್ನುವ ಸ್ಪರ್ಧೆಯಲ್ಲಿ 9 ಮಂದಿ ಭಾಗವಹಿಸಿದ್ದರು. ಇದರಲ್ಲಿ ಗುರುಪ್ಪಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ. ಕಡತೂರು ಗ್ರಾಮದ ಕೃಷ್ಣಪ್ಪ ಶೆಟ್ಟಿ 9 ಮುದ್ದೆ ತಿನ್ನುವ ಮೂಲಕ ದ್ವಿತೀಯ ಸ್ಥಾನ ಪಡೆದು ₹5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಪಡೆದಿದ್ದಾರೆ. ತಲಾ 7 ಮುದ್ದೆ ತಿನ್ನುವ ಮೂಲಕ ನಾಗೇಶ್ ಹಾಗೂ ಅಂಬರೀಶ್ ಮೂರನೇ ಸ್ಥಾನ ಪಡೆದು ₹1.5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ತನ್ನದಾಗಿಸಿಕೊಂಡಿದ್ದಾರೆ.</p>.<p>ಮಾಜಿ ಶಾಸಕ ಎ.ನಾಗರಾಜು, ಕೆ.ಎಸ್.ಮಂಜುನಾಥ ಗೌಡ, ರಾಜ್ಯಾಧ್ಯಕ್ಷ ಬಸವರಾಜ್ ಪಡಕೋಟೆ, ಎಂ.ವಿ.ಹನುಮಂತಪ್ಪ, ಚಾಕನಹಳ್ಳಿ ನಾಗರಾಜ್, ಆಟೊ ಶ್ರೀನಿವಾಸ್, ಕೋಡುರು ಗೋಪಾಲ್, ರವಿ, ಜಗದೀಶ್, ಅಶೋಕ್ ಕುಮಾರ್, ಚನ್ನಕೃಷ್ಣ, ಎಸ್.ಎಂ.ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>