ಮಾಲೂರು: ಶಿಥಿಲಗೊಂಡಿದ್ದ ಪಟ್ಟಣದ ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿಗೆ ಪಿಡಬ್ಲ್ಯೂಡಿ ಇಲಾಖೆ ಮುಂದಾಗಿದ್ದು, ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ.
ಮಾಲೂರು-ಹೊಸೂರು ರಸ್ತೆಯ ರೈಲ್ವೆ ಮೇಲ್ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಪ್ರಜಾವಾಣಿ ಆಗಸ್ಟ್ 14ರ ಸಂಚಿಕೆಯಲ್ಲಿ ‘ಕುಸಿಯುವ ಸ್ಥಿತಿಯಲ್ಲಿ ರೈಲ್ವೆ ಮೇಲ್ಸೇತುವೆ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
ದುರಸ್ತಿ ಕಾಮಗಾರಿ ಆರಂಭವಾಗಿದೆ. ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ರಾತ್ರಿ 10 ಗಂಟೆ ನಂತರ ಕಾಮಗಾರಿ ನಡೆಸಲಾಗುವುದು. ಈ ಬಗ್ಗೆ ಸರ್ಕಾರಕ್ಕೂ ವರದಿ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಎಂಜನಿಯರ್ ರಾಜಗೋಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.