<p><strong>ಮುಳಬಾಗಿಲು:</strong> ತಾಲ್ಲೂಕಿನಲ್ಲಿ ಶುಕ್ರವಾರ ಬಿದ್ದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಶುಕ್ರವಾರ ಬೆಳ್ಳಂ ಬೆಳಿಗ್ಗೆಯೇ ಸುರಿಯಿತು. ಜೊತೆಗೆ ಸಂಜೆ 4 ಗಂಟೆಯಿಂದ 6 ಗಂಟೆವರೆಗೂ ಮಳೆ ಬೀಳುತ್ತಲೇ ಇತ್ತು. ನಂತರ ಜಡಿ ಮಳೆ ಸುರಿಯುತ್ತಿದ್ದು, ಜನ ಜನವಾರುಗಳ ಓಡಾಟಕ್ಕೆ ತೊಂದರೆಯುಂಟಾಯಿತು.</p>.<p>ಮಳೆ ನೀರಿನಿಂದ ಸಾಮಿಲ್ ಮುಂಭಾಗದ ರಸ್ತೆ ಸಂಪೂರ್ಣವಾಗಿ ಮುಳುಗಿ ಕುಂಟೆಯಂತಾಗಿತ್ತು. ಮುಖ್ಯರಸ್ತೆಯಲ್ಲಿ ಸುಮಾರು ಮೂರು ಅಡಿಗಳಿಗಿಂತಲೂ ಹೆಚ್ಚು ಆಳ ನೀರು ನಿಂತಿದ್ದು, ಸಂಚಾರಕ್ಕೆ ಕಷ್ಟವಾಗಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ 75ರ ಉದ್ದಕ್ಕೂ ಬಸ್ ತಂಗುದಾಣಗಳಲ್ಲಿ ದ್ವಿಚಕ್ರ ವಾಹನ ಸವಾರರು ಆಶ್ರಯ ಪಡೆದರು. ಗ್ರಾಮೀಣ ಭಾಗದಲ್ಲಿ ಮನೆ ಮುಂದೆ ನೀರು ನಿಂತಿದ್ದು, ರಸ್ತೆಗಳಲ್ಲಿ ಕಸ, ಕಡ್ಡಿ ಕೊಚ್ಚಿ ಹೋಗುತ್ತಿದ್ದವು. </p>.<p>ನರಸಿಂಹ ತೀರ್ಥ, ವಿರುಪಾಕ್ಷಿ ರಸ್ತೆ, ನಂಗಲಿ, ಎನ್.ವಡ್ಡಹಳ್ಳಿ, ತಾಯಲೂರು ವೃತ್ತಗಳ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನೀರು ನಿಂತು ಕುಂಟಗಳಂತಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ತಾಲ್ಲೂಕಿನಲ್ಲಿ ಶುಕ್ರವಾರ ಬಿದ್ದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಶುಕ್ರವಾರ ಬೆಳ್ಳಂ ಬೆಳಿಗ್ಗೆಯೇ ಸುರಿಯಿತು. ಜೊತೆಗೆ ಸಂಜೆ 4 ಗಂಟೆಯಿಂದ 6 ಗಂಟೆವರೆಗೂ ಮಳೆ ಬೀಳುತ್ತಲೇ ಇತ್ತು. ನಂತರ ಜಡಿ ಮಳೆ ಸುರಿಯುತ್ತಿದ್ದು, ಜನ ಜನವಾರುಗಳ ಓಡಾಟಕ್ಕೆ ತೊಂದರೆಯುಂಟಾಯಿತು.</p>.<p>ಮಳೆ ನೀರಿನಿಂದ ಸಾಮಿಲ್ ಮುಂಭಾಗದ ರಸ್ತೆ ಸಂಪೂರ್ಣವಾಗಿ ಮುಳುಗಿ ಕುಂಟೆಯಂತಾಗಿತ್ತು. ಮುಖ್ಯರಸ್ತೆಯಲ್ಲಿ ಸುಮಾರು ಮೂರು ಅಡಿಗಳಿಗಿಂತಲೂ ಹೆಚ್ಚು ಆಳ ನೀರು ನಿಂತಿದ್ದು, ಸಂಚಾರಕ್ಕೆ ಕಷ್ಟವಾಗಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ 75ರ ಉದ್ದಕ್ಕೂ ಬಸ್ ತಂಗುದಾಣಗಳಲ್ಲಿ ದ್ವಿಚಕ್ರ ವಾಹನ ಸವಾರರು ಆಶ್ರಯ ಪಡೆದರು. ಗ್ರಾಮೀಣ ಭಾಗದಲ್ಲಿ ಮನೆ ಮುಂದೆ ನೀರು ನಿಂತಿದ್ದು, ರಸ್ತೆಗಳಲ್ಲಿ ಕಸ, ಕಡ್ಡಿ ಕೊಚ್ಚಿ ಹೋಗುತ್ತಿದ್ದವು. </p>.<p>ನರಸಿಂಹ ತೀರ್ಥ, ವಿರುಪಾಕ್ಷಿ ರಸ್ತೆ, ನಂಗಲಿ, ಎನ್.ವಡ್ಡಹಳ್ಳಿ, ತಾಯಲೂರು ವೃತ್ತಗಳ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನೀರು ನಿಂತು ಕುಂಟಗಳಂತಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>