ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಲ್ಲಿ ಮಿಂದ ಮಾವಿನ ಮಡಿಲು

Last Updated 13 ಜುಲೈ 2020, 5:59 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಭಾರಿ ಮಳೆ ಸುರಿದಿದೆ. ವ್ಯಾಪಕವಾಗಿ ಸುರಿದ ಪರಿಣಾಮ ಕೆರೆ ಕುಂಟೆಗಳಿಗೆ ನೀರು ಹರಿದು ಬಂದಿದೆ.

ಕಳೆದ ಮೂರು ದಿನಗಳಿಂದ ರಾತ್ರಿ ಹೊತ್ತು ಸುರಿಯುತ್ತಿರುವ ಮಳೆಯಿಂದಾಗಿ ನೆಲದಲ್ಲಿ ತೇವಾಂಶ ಹೆಚ್ಚಿ, ಉಳುಮೆ ಹಾಗೂ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ರೈತರು ಮಾವಿನ ತೋಟಗಳಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ಕೀಳುವ ಕಾರ್ಯದಲ್ಲಿ ತೊಡಗಿದ್ದಾರೆ.

ಕೆಲವು ಕಡೆ ತಗ್ಗು ಪ್ರದೇಶದಲ್ಲಿ ಬೆಳೆಯಲಾಗಿರುವ ಟೊಮೆಟೊ, ಕೋಸು, ಮತ್ತಿತರ ತೋಟದ ಬೆಳೆಗಳಿಗೆ ಹಾನಿ ಉಂಟಾಗಿದೆ. ಮೊದಲ ಮಳೆಗೆ ಬಿತ್ತನೆ ಮಾಡಲಾಗಿದ್ದ ರಾಗಿ ಹೊಲಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಗಿದೆ.

ತಾಲ್ಲೂಕಿನಲ್ಲಿ ನಿರ್ಮಿಸಲಾಗಿರುವ ರೈಲ್ವೆ ಕೆಳ ಸೇತುವೆಗಳಲ್ಲಿ ನೀರು ತುಂಬಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೇತುವೆಗಳ ಕೆಳಗೆ ವಾಹನ ಸಂಚಾರ ಸಾಧ್ಯವಾಗದೆ ಸಮಸ್ಯೆ ಉಂಟಾಗಿದೆ. ಕಳಪೆ ಕಾಮಗಾರಿಯ ಪರಿಣಾಮ ಈ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT