ಮಾವು ಕೊಯ್ಲು ಆರಂಭವಾಗಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಮಳೆರಾಯ ಕಣ್ಣೀರು ತರಿಸಿದ್ದಾನೆ. ಗಾಳಿಯ ತೀವ್ರತೆಗೆ ಮಾವಿನ ಕಾಯಿಗಳು ಗಿಡದಿಂದ ಉದುರಿವೆ. ಹಲವೆಡೆ ಮರಗಳೇ ಉರುಳಿ ಬಿದ್ದಿವೆ. ಮಳೆಯ ಕಾರಣಕ್ಕೆ ವಾತಾವರಣದಲ್ಲಿ ತೇವಾಂಶ ಹೆಚ್ಚಳಗೊಂಡು ತೋಟಗಾರಿಕೆ ಬೆಳೆಗಳು ಮತ್ತು ಹಣ್ಣಿನ ಬೆಳೆಗಳಲ್ಲಿ ಶಿಲೀಂಧ್ರ ರೋಗ ಕಾಣಿಸಿಕೊಂಡಿದೆ. ಹೂವು ಕಟಾವಿಗೆ ಸಮಸ್ಯೆಯಾಗಿದ್ದು, ಹೂವುಗಳು ಜಮೀನಿನಲ್ಲೇ ಕೊಳೆಯಲಾರಂಭಿಸಿವೆ.