‘ಖಾದ್ರಿಪುರ ರೈಲ್ವೆ ಕೆಳ ಸೇತುವೆಯು ನಗರಸಭೆ ವ್ಯಾಪ್ತಿಯಲ್ಲಿ ಇಲ್ಲ. ಬದಲಿಗೆ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುತ್ತದೆ’ ಎಂದು ನಗರಸಭೆ ಅಧಿಕಾರಿಗಳು ಶಾಸಕರಿಗೆ ತಿಳಿಸಿದರು. ಬಳಿಕ ಶಾಸಕರು, ‘ಕೊಂಡರಾಜನಹಳ್ಳಿ ಗ್ರಾ.ಪಂ ಅಧಿಕಾರಿಗಳಿಗೆ ಕೆಳ ಸೇತುವೆ ನಿರ್ವಹಣೆ ಮಾಡುವಂತೆ ಸೂಚಿಸುತ್ತೇನೆ. ಕೆಳ ಸೇತುವೆ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ರೈಲ್ವೆ ಮಂಡಳಿ ಅಧಿಕಾರಿಗಳ ಸಭೆ ಕರೆಯಿರಿ’ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.