ಜೆಡಿಎಸ್ ಅಭ್ಯರ್ಥಿ ಪಟೇಲ್, ಜಿ.ಎಂ. ತಿಪ್ಪೇಸ್ವಾಮಿ ಮಾತನಾಡಿ, ‘ಪಕ್ಷಕ್ಕೆ ಎಲ್ಲಾ ಹೋಬಳಿಯಲ್ಲೂ ಉತ್ತಮ ಮತ ಬಿದ್ದಿವೆ. ಪಕ್ಷೇತರ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಎಷ್ಟರ ಮಟ್ಟಿಗೆ ಬಿಜೆಪಿ ಮತಗಳನ್ನು ಕೀಳುತ್ತಾರೋ ಅಷ್ಟೂ ನಮಗೆ ಅನುಕೂಲವಾಗುತ್ತದೆ. ಮುಸ್ಲಿಂ ಮತಗಳು ನಮಗೆ ಹೆಚ್ಚಾಗಿ ಬಿದ್ದಿದೆ. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಹೇಳಿದರು.