<p><strong>ಕೋಲಾರ:</strong> ‘ಚಿತ್ರನಟ ದಿವಂಗತ ರಾಜ್ಕುಮಾರ್ ಅವರು ಕನ್ನಡದ ಮೇರು ನಟ ಮಾತ್ರವಲ್ಲದೆ ರಾಜ್ಯದ ಸಾಂಸ್ಕೃತಿಕ ರಾಯಭಾರಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಬಣ್ಣಿಸಿದರು.</p>.<p>ಜಿಲ್ಲಾಡಳಿತವು ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಕುಮಾರ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ‘ರಾಜ್ಕುಮಾರ್ ಅವರು ಅಭಿನಯಕ್ಕೆ ಮಾತ್ರ ಸೀಮಿತರಾಗದೆ ಕನ್ನಡ ನಾಡು, ನುಡಿ, ನೆಲ, ಜಲದ ವಿಚಾರವಾಗಿ ಹೋರಾಟ ನಡೆಸಿ ಅನನ್ಯ ಕೊಡುಗೆ ನೀಡಿದ್ದಾರೆ’ ಎಂದು ಸ್ಮರಿಸಿದರು.</p>.<p>‘ಅಭಿಮಾನಿಗಳೇ ದೇವರು ಎಂದು ಕರೆದ ರಾಜ್ಕುಮಾರ್ ಸದಾ ಜನರ ಮಧ್ಯೆ ಇರುತ್ತಿದ್ದರು. ಅವರು ರಾಜ್ಯದ ಸಾಂಸ್ಕೃತಿಕ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ರಾಜ್ಯದಲ್ಲಿ ಅವರ ಹೆಸರು ಗೊತ್ತಿರದವರು ಯಾರೂ ಇಲ್ಲ. ರಾಜ್ಕುಮಾರ್ರ ಶಿಸ್ತಿನ ಜೀವನ ಎಲ್ಲರಿಗೂ ದಾರಿದೀಪ’ ಎಂದು ಅಭಿಪ್ರಾಯಪಟ್ಟರು.</p>.<p>‘ರಾಜ್ಕುಮಾರ್ ಚಿತ್ರರಂಗದ ಜತೆಗೆ ಕನ್ನಡಪರ ಹೋರಾಟಗಳಲ್ಲೂ ಮುಂಚೂಣಿಯಲ್ಲಿದ್ದರು. ಅವರು ಅದ್ಭುತ ನಟನೆಯ ಜತೆಗೆ ಸರಳ ಜೀವನ ಶೈಲಿಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅವರ ಶಿಸ್ತು, ಕರ್ತವ್ಯ ನಿಷ್ಠೆ, ಸರಳ ಜೀವನ ತತ್ವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ರಾಜ್ಕುಮಾರ್ರ ಚಲನಚಿತ್ರಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವರು ಎಂದಿಗೂ ವಿವಾದಾತ್ಮಕವಾಗಿ ಮಾತನಾಡಿದವರಲ್ಲ. ಅವರ ಸಿನಿಮಾ ನೋಡಿ ಯಾವುದೇ ವ್ಯಕ್ತಿ ಹಾಳಾಗಿರುವ ಉದಾಹರಣೆಯಿಲ್ಲ. ಆದ ಕಾರಣ ಪೋಷಕರು ಮಕ್ಕಳಿಗೆ ರಾಜ್ಕುಮಾರ್ ಅಭಿನಯದ ಚಲನಚಿತ್ರಗಳನ್ನು ತೋರಿಸಿ ಮಾನವೀಯ ಮೌಲ್ಯ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<p><strong>ಅವಿನಾಭಾವ ಸಂಬಂಧ: </strong>‘ರಾಜ್ಕುಮಾರ್ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೂ ಹಾಗೂ ಜಿಲ್ಲೆಗೂ ಅವಿನಾಭಾವ ಸಂಬಂಧವಿತ್ತು. ಗೋಕಾಕ್ ಚಳವಳಿ ಸಂದರ್ಭದಲ್ಲಿ ಅವರು ಜಿಲ್ಲೆಗೆ ಬಂದು ಜನರಲ್ಲಿ ಹೋರಾಟದ ಕಿಚ್ಚು ಹೊತ್ತಿಸಿದ್ದರು. ಅವರ ನೆನಪು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಿಸುತ್ತಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಾನಂದ ಕೆಂಪರಾಜು, ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಚಿತ್ರನಟ ದಿವಂಗತ ರಾಜ್ಕುಮಾರ್ ಅವರು ಕನ್ನಡದ ಮೇರು ನಟ ಮಾತ್ರವಲ್ಲದೆ ರಾಜ್ಯದ ಸಾಂಸ್ಕೃತಿಕ ರಾಯಭಾರಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಬಣ್ಣಿಸಿದರು.</p>.<p>ಜಿಲ್ಲಾಡಳಿತವು ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಕುಮಾರ್ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ‘ರಾಜ್ಕುಮಾರ್ ಅವರು ಅಭಿನಯಕ್ಕೆ ಮಾತ್ರ ಸೀಮಿತರಾಗದೆ ಕನ್ನಡ ನಾಡು, ನುಡಿ, ನೆಲ, ಜಲದ ವಿಚಾರವಾಗಿ ಹೋರಾಟ ನಡೆಸಿ ಅನನ್ಯ ಕೊಡುಗೆ ನೀಡಿದ್ದಾರೆ’ ಎಂದು ಸ್ಮರಿಸಿದರು.</p>.<p>‘ಅಭಿಮಾನಿಗಳೇ ದೇವರು ಎಂದು ಕರೆದ ರಾಜ್ಕುಮಾರ್ ಸದಾ ಜನರ ಮಧ್ಯೆ ಇರುತ್ತಿದ್ದರು. ಅವರು ರಾಜ್ಯದ ಸಾಂಸ್ಕೃತಿಕ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ರಾಜ್ಯದಲ್ಲಿ ಅವರ ಹೆಸರು ಗೊತ್ತಿರದವರು ಯಾರೂ ಇಲ್ಲ. ರಾಜ್ಕುಮಾರ್ರ ಶಿಸ್ತಿನ ಜೀವನ ಎಲ್ಲರಿಗೂ ದಾರಿದೀಪ’ ಎಂದು ಅಭಿಪ್ರಾಯಪಟ್ಟರು.</p>.<p>‘ರಾಜ್ಕುಮಾರ್ ಚಿತ್ರರಂಗದ ಜತೆಗೆ ಕನ್ನಡಪರ ಹೋರಾಟಗಳಲ್ಲೂ ಮುಂಚೂಣಿಯಲ್ಲಿದ್ದರು. ಅವರು ಅದ್ಭುತ ನಟನೆಯ ಜತೆಗೆ ಸರಳ ಜೀವನ ಶೈಲಿಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅವರ ಶಿಸ್ತು, ಕರ್ತವ್ಯ ನಿಷ್ಠೆ, ಸರಳ ಜೀವನ ತತ್ವವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ರಾಜ್ಕುಮಾರ್ರ ಚಲನಚಿತ್ರಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವರು ಎಂದಿಗೂ ವಿವಾದಾತ್ಮಕವಾಗಿ ಮಾತನಾಡಿದವರಲ್ಲ. ಅವರ ಸಿನಿಮಾ ನೋಡಿ ಯಾವುದೇ ವ್ಯಕ್ತಿ ಹಾಳಾಗಿರುವ ಉದಾಹರಣೆಯಿಲ್ಲ. ಆದ ಕಾರಣ ಪೋಷಕರು ಮಕ್ಕಳಿಗೆ ರಾಜ್ಕುಮಾರ್ ಅಭಿನಯದ ಚಲನಚಿತ್ರಗಳನ್ನು ತೋರಿಸಿ ಮಾನವೀಯ ಮೌಲ್ಯ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<p><strong>ಅವಿನಾಭಾವ ಸಂಬಂಧ: </strong>‘ರಾಜ್ಕುಮಾರ್ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೂ ಹಾಗೂ ಜಿಲ್ಲೆಗೂ ಅವಿನಾಭಾವ ಸಂಬಂಧವಿತ್ತು. ಗೋಕಾಕ್ ಚಳವಳಿ ಸಂದರ್ಭದಲ್ಲಿ ಅವರು ಜಿಲ್ಲೆಗೆ ಬಂದು ಜನರಲ್ಲಿ ಹೋರಾಟದ ಕಿಚ್ಚು ಹೊತ್ತಿಸಿದ್ದರು. ಅವರ ನೆನಪು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಿಸುತ್ತಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶಿವಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಾನಂದ ಕೆಂಪರಾಜು, ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>