ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌: ರಾಮಲಿಂಗೇಶ್ವರ ರಥೋತ್ಸವ

Last Updated 20 ಫೆಬ್ರುವರಿ 2023, 6:06 IST
ಅಕ್ಷರ ಗಾತ್ರ

ಕೆಜಿಎಫ್‌: ರಾಬರ್ಟಸನ್‌ಪೇಟೆಯ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.

ಅಂಕುರಾರ್ಪಣೆ ಕಾರ್ಯಕ್ರಮದ ಮೂಲಕ ಬುಧವಾರದಿಂದ ಪ್ರಾರಂಭವಾದ 60ನೇ ವರ್ಷದ ಬ್ರಹ್ಮೋತ್ಸವದ ಅಂಗವಾಗಿ ಮಹಾಶಿವರಾತ್ರಿ ರುದ್ರಾಭಿಷೇಕದ ನಂತರ ದೇವಾಲಯದ ಬಳಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಗೀತಾ ರಸ್ತೆಯಲ್ಲಿ ಸಾಗಿದ ರಥಕ್ಕೆ ಭಕ್ತರು ಬಾಳೆ ಹಣ್ಣು ಮತ್ತು ದವನ ಎಸೆದು ಕೃತಾರ್ಥರಾದರು. ಮಹಿಳೆಯರು ಮನೆ ಮುಂಭಾಗದಲ್ಲಿ ಸಿಂಗಾರ ಮಾಡಿ ರಥಕ್ಕೆ ಸ್ವಾಗತ ಕೋರಿದರು. ಸನಾತನ ಧರ್ಮಸಭಾದ ಅಧ್ಯಕ್ಷ ಡಾ.ಮಂಜುನಾಥ್‌, ರಥೋತ್ಸವ ಸಮಿತಿ ಅಧ್ಯಕ್ಷ ನಾರಾಯಣಮೂರ್ತಿ, ಗುರುಸ್ವಾಮಿ, ಕೃಷ್ಣಮೂರ್ತಿ, ರಾಮಕೃಷ್ಣ, ಜಗದೀಶ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT