<p><strong>ಕೋಲಾರ: </strong>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮ ಊರು ನಮ್ಮ ಕೆರೆ’ ಯೋಜನೆಯಡಿ ಪುನಶ್ಚೇತನಗೊಳಿಸಿರುವ ತಾಲ್ಲೂಕಿನ ಸುಗಟೂರು ಗ್ರಾಮದ ರಾಮಯ್ಯ ಕೆರೆ ತುಂಬಿ ಕೋಡಿ ಹರಿಯುತ್ತಿರುವುದನ್ನು ಬುಧವಾರ ವೀಕ್ಷಿಸಿದ ಯೋಜನೆ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಜಿಲ್ಲೆಯ ಅನೇಕ ಕೆರೆಗಳಲ್ಲಿ ಹೂಳೆತ್ತಿ ಪುನಶ್ಚೇತನಗೊಳಿಸಲಾಗಿದೆ. ಅದೇ ರೀತಿ 2019–20ನೇ ಸಾಲಿನಲ್ಲಿ ರಾಮಯ್ಯ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು’ ಎಂದು ಚಂದ್ರಶೇಖರ್ ಹೇಳಿದರು.</p>.<p>‘ಸುಮಾರು 23 ಎಕರೆ ವಿಸ್ತಾರವಾಗಿರುವ ರಾಮಯ್ಯನ ಕೆರೆ ಪುನಶ್ಚೇತನಕ್ಕೆ ₹ 10 ಲಕ್ಷ ವೆಚ್ಚವಾಗಿತ್ತು. ಸುಗಟೂರು ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಕೆರೆಯಲ್ಲಿ ಹೂಳು ತೆಗೆಯಲಾಗಿತ್ತು’ ಎಂದು ತಿಳಿಸಿದರು.</p>.<p>‘ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಮತ್ತು ಕೆ.ಸಿ ವ್ಯಾಲಿ ನೀರು ಅಗ್ರಹಾರ ಕೆರೆಯಿಂದ ಹರಿದು ಬಂದು ಈ ಕೆರೆಗೆ ಸೇರಿರುವುದರಿಂದ ಈಗ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕಳೆದ 3 ವರ್ಷಗಳ ಹಿಂದೆ ಅರಾಭಿಕೊತ್ತನೂರು ಕೆರೆಯ ಹೂಳು ತೆಗೆದು ಪುನಶ್ಚೇತನಗೊಳಿಸಲಾಗಿತ್ತು. ಆ ಕೆರೆಯೂ ಭರ್ತಿಯಾಗಿದೆ’ ಎಂದರು.</p>.<p>‘ಜಿಲ್ಲೆಯ ನದಿ, ನಾಲೆಯಂತಹ ಮೇಲ್ಮೈ ನೀರಿನ ಮೂಲಗಳಿಲ್ಲ. ಹೀಗಾಗಿ ಜಿಲ್ಲೆಗೆ ಕೆರೆಗಳೇ ಜೀವಾಳವಾಗಿವೆ. ಪ್ರಕೃತಿದತ್ತವಾದ ಕೆರೆಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಜಿಲ್ಲೆಯ ಕೆರೆಗಳ ಪುನಶ್ಚೇತನಕ್ಕೆ ನೆರವಾಗುತ್ತಿದ್ದಾರೆ’ ಎಂದು ವಿವರಿಸಿದರು.</p>.<p>ಸಾಮಾಜಿಕ ಕಾರ್ಯ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯ ಕೈಗೊಂಡಿದೆ. ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ. ಅನಾಥರು ಹಾಗೂ ಅಸಹಾಯಕರಿಗೆ ಮಾಸಿಕ ವೇತನ ನೀಡುತ್ತಿದೆ’ ಎಂದು ರಾಮಯ್ಯ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಜಿಲ್ಲೆಯ ಬಗ್ಗೆ ಕಾಳಜಿ ತೋರಿದ್ದು, ನಮ್ಮ ಗ್ರಾಮದ ಕೆರೆ ಪುನಶ್ಚೇತನಗೊಳಿಸಿದ್ದಾರೆ. ಈ ಕೆರೆ ತುಂಬಿ 16 ವರ್ಷವಾಗಿತ್ತು, ಇದೀಗ ಕೆರೆ ತುಂಬಿ ನೀರಿನಿಂದ ಕಂಗೊಳಿಸುತ್ತಿದ್ದು, ಸುತ್ತಮುತ್ತಲಿನ 70ಕ್ಕೂ ಹೆಚ್ಚು ಕೊಳವೆ ಬಾವಿಗಳು ಜಲ ಮರುಪೂರಣಗೊಂಡಿವೆ. ರೈತರ ಬದುಕು ಹಸನಾಗಿಸಲು ಶ್ರಮಿಸಿದ ಯೋಜನೆ ಪ್ರತಿನಿಧಿಗಳಿಗೆ ಗ್ರಾಮಸ್ಥರು ಚಿರಋಣಿಯಾಗಿದ್ದೇವೆ’ ಎಂದರು.</p>.<p>‘ಕೆರೆ ತುಂಬಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ತುಂಬಾ ಅನುಕೂಲವಾಗಿದೆ. ಕೆರೆ ಉಳಿಸಲು ಗ್ರಾಮಸ್ಥರು ಕೈಜೋಡಿಸಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಎಸ್.ಚಂದ್ರಶೇಖರ್ ಸಲಹೆ ನೀಡಿದರು,</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಎಸ್.ರಾಜೇಶ್, ಚಿಟ್ನಹಳ್ಳಿ ಗ್ರಾಮಸ್ಥ ಸಿ.ಬಿ.ಆನಂದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮ ಊರು ನಮ್ಮ ಕೆರೆ’ ಯೋಜನೆಯಡಿ ಪುನಶ್ಚೇತನಗೊಳಿಸಿರುವ ತಾಲ್ಲೂಕಿನ ಸುಗಟೂರು ಗ್ರಾಮದ ರಾಮಯ್ಯ ಕೆರೆ ತುಂಬಿ ಕೋಡಿ ಹರಿಯುತ್ತಿರುವುದನ್ನು ಬುಧವಾರ ವೀಕ್ಷಿಸಿದ ಯೋಜನೆ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಜಿಲ್ಲೆಯ ಅನೇಕ ಕೆರೆಗಳಲ್ಲಿ ಹೂಳೆತ್ತಿ ಪುನಶ್ಚೇತನಗೊಳಿಸಲಾಗಿದೆ. ಅದೇ ರೀತಿ 2019–20ನೇ ಸಾಲಿನಲ್ಲಿ ರಾಮಯ್ಯ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು’ ಎಂದು ಚಂದ್ರಶೇಖರ್ ಹೇಳಿದರು.</p>.<p>‘ಸುಮಾರು 23 ಎಕರೆ ವಿಸ್ತಾರವಾಗಿರುವ ರಾಮಯ್ಯನ ಕೆರೆ ಪುನಶ್ಚೇತನಕ್ಕೆ ₹ 10 ಲಕ್ಷ ವೆಚ್ಚವಾಗಿತ್ತು. ಸುಗಟೂರು ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಕೆರೆಯಲ್ಲಿ ಹೂಳು ತೆಗೆಯಲಾಗಿತ್ತು’ ಎಂದು ತಿಳಿಸಿದರು.</p>.<p>‘ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಮತ್ತು ಕೆ.ಸಿ ವ್ಯಾಲಿ ನೀರು ಅಗ್ರಹಾರ ಕೆರೆಯಿಂದ ಹರಿದು ಬಂದು ಈ ಕೆರೆಗೆ ಸೇರಿರುವುದರಿಂದ ಈಗ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕಳೆದ 3 ವರ್ಷಗಳ ಹಿಂದೆ ಅರಾಭಿಕೊತ್ತನೂರು ಕೆರೆಯ ಹೂಳು ತೆಗೆದು ಪುನಶ್ಚೇತನಗೊಳಿಸಲಾಗಿತ್ತು. ಆ ಕೆರೆಯೂ ಭರ್ತಿಯಾಗಿದೆ’ ಎಂದರು.</p>.<p>‘ಜಿಲ್ಲೆಯ ನದಿ, ನಾಲೆಯಂತಹ ಮೇಲ್ಮೈ ನೀರಿನ ಮೂಲಗಳಿಲ್ಲ. ಹೀಗಾಗಿ ಜಿಲ್ಲೆಗೆ ಕೆರೆಗಳೇ ಜೀವಾಳವಾಗಿವೆ. ಪ್ರಕೃತಿದತ್ತವಾದ ಕೆರೆಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಜಿಲ್ಲೆಯ ಕೆರೆಗಳ ಪುನಶ್ಚೇತನಕ್ಕೆ ನೆರವಾಗುತ್ತಿದ್ದಾರೆ’ ಎಂದು ವಿವರಿಸಿದರು.</p>.<p>ಸಾಮಾಜಿಕ ಕಾರ್ಯ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯ ಕೈಗೊಂಡಿದೆ. ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ. ಅನಾಥರು ಹಾಗೂ ಅಸಹಾಯಕರಿಗೆ ಮಾಸಿಕ ವೇತನ ನೀಡುತ್ತಿದೆ’ ಎಂದು ರಾಮಯ್ಯ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಜಿಲ್ಲೆಯ ಬಗ್ಗೆ ಕಾಳಜಿ ತೋರಿದ್ದು, ನಮ್ಮ ಗ್ರಾಮದ ಕೆರೆ ಪುನಶ್ಚೇತನಗೊಳಿಸಿದ್ದಾರೆ. ಈ ಕೆರೆ ತುಂಬಿ 16 ವರ್ಷವಾಗಿತ್ತು, ಇದೀಗ ಕೆರೆ ತುಂಬಿ ನೀರಿನಿಂದ ಕಂಗೊಳಿಸುತ್ತಿದ್ದು, ಸುತ್ತಮುತ್ತಲಿನ 70ಕ್ಕೂ ಹೆಚ್ಚು ಕೊಳವೆ ಬಾವಿಗಳು ಜಲ ಮರುಪೂರಣಗೊಂಡಿವೆ. ರೈತರ ಬದುಕು ಹಸನಾಗಿಸಲು ಶ್ರಮಿಸಿದ ಯೋಜನೆ ಪ್ರತಿನಿಧಿಗಳಿಗೆ ಗ್ರಾಮಸ್ಥರು ಚಿರಋಣಿಯಾಗಿದ್ದೇವೆ’ ಎಂದರು.</p>.<p>‘ಕೆರೆ ತುಂಬಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬರುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ತುಂಬಾ ಅನುಕೂಲವಾಗಿದೆ. ಕೆರೆ ಉಳಿಸಲು ಗ್ರಾಮಸ್ಥರು ಕೈಜೋಡಿಸಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಎಸ್.ಚಂದ್ರಶೇಖರ್ ಸಲಹೆ ನೀಡಿದರು,</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಎಸ್.ರಾಜೇಶ್, ಚಿಟ್ನಹಳ್ಳಿ ಗ್ರಾಮಸ್ಥ ಸಿ.ಬಿ.ಆನಂದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>