ಸಿಇಒ ಹುದ್ದೆಗೆ ಕಾಯಂ ಅಧಿಕಾರಿ ನೇಮಿಸುವಂತೆ ಸಂಘಟನೆಗಳು ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಇದರ ಬೆನ್ನಲ್ಲೇ ಸರ್ಕಾರ ರವಿಕುಮಾರ್ ಅವರನ್ನು ಸಿಇಒ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದೆ. ಸದ್ಯ ರವಿಕುಮಾರ್, ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ (ಕೆಎಸ್ಎಂಬಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.