ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಾಂತ ರೈತ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ ಜಾರಿಯಾದರೆ, ರಾಜ್ಯದ 35 ಲಕ್ಷ ಕುಟುಂಬಗಳು ಸೇರಿದಂತೆ, ದೇಶದ 10 ಕೋಟಿಗಿಂತ ಹೆಚ್ಚಿನ ಸಂಖ್ಯೆಯ ಹಾಲು ಉತ್ಪಾದರು, ಕೃಷಿ ಕೂಲಿಕಾರರು ಹಾಗೂ ಈ ಕ್ಷೇತ್ರದಲ್ಲಿ ತೊಡಗಿರುವ ನೌಕರರು ಅನ್ನದ ಆಸರೆ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.