<p><strong>ಕೋಲಾರ: </strong>ತಾಲ್ಲೂಕಿನ ಮುದುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಹೊರಗುಳಿದಿದ್ದ 3 ವಿದ್ಯಾರ್ಥಿಗಳನ್ನು ಶಾಲೆಗೆ ಮಂಗಳವಾರ ಮರು ಸೇರ್ಪಡೆ ಮಾಡಲಾಯಿತು.</p>.<p>ಬಿಹಾರ ಮೂಲದ ಈ 3 ಮಕ್ಕಳು ಕಳೆದ ಕೆಲ ತಿಂಗಳಿಂದ ಶಾಲೆಗೆ ಬರುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಹಾಗೂ ಶಿಕ್ಷಕರ ತಂಡವು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತಂದಿತು. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬ್ಯಾಗ್ ಹಾಗೂ ಲೇಖನಿ ಸಾಮಗ್ರಿ ವಿತರಿಸಲಾಯಿತು.</p>.<p>‘ಕೋವಿಡ್ ಸಂದರ್ಭದಲ್ಲಿ ಕೆಲ ಕುಟುಂಬಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗಿವೆ. ಆ ಕುಟುಂಬಗಳ ಮಕ್ಕಳನ್ನು ಶಾಲೆಯಿಂದ ಹೊರಗುಳಿದ ಮಕ್ಕಳೆಂದು ಗುರುತಿಸಲಾಗಿದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ಕಾರ್ಯವನ್ನು ಚಾಚೂತಪ್ಪದೆ ನಿರ್ವಹಿಸುತ್ತಿದ್ದೇವೆ’ ಶ್ರೀನಿವಾಸನ್ ತಿಳಿಸಿದರು.</p>.<p>‘ಶಾಲಾ ಮುಖ್ಯ ಶಿಕ್ಷಕರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಕ್ಷಣ ಸಂಯೋಜಕರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಬೇಕು. ವಲಸೆ ಹೋದ ಕುಟುಂಬಗಳ ದಾಖಲೆಪತ್ರ ನಿರ್ವಹಣೆ ಮತ್ತು ಆ ಕುಟುಂಬಗಳಲ್ಲಿ ಮಕ್ಕಳಿದ್ದು, ಶಾಲೆಗೆ ಬಾರದಿದ್ದರೆ ಅಂತಹವರನ್ನು ಪತ್ತೆ ಹಚ್ಚಿ ಶಾಲೆಗಳಿಗೆ ದಾಖಲು ಮಾಡಬೇಕೆಂದು ಇಲಾಖೆ ಆದೇಶವಿದೆ’ ಎಂದರು.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಪ್ರೀತಿ, ಮುದುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವನಿತಾಕುಮಾರಿ, ಶಿಕ್ಷಕರಾದ ಚಲಪತಿ, ಗಾಯತ್ರಿ, ವರಲಕ್ಷ್ಮಿ, ಸ್ವರ್ಣಲತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಮುದುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಹೊರಗುಳಿದಿದ್ದ 3 ವಿದ್ಯಾರ್ಥಿಗಳನ್ನು ಶಾಲೆಗೆ ಮಂಗಳವಾರ ಮರು ಸೇರ್ಪಡೆ ಮಾಡಲಾಯಿತು.</p>.<p>ಬಿಹಾರ ಮೂಲದ ಈ 3 ಮಕ್ಕಳು ಕಳೆದ ಕೆಲ ತಿಂಗಳಿಂದ ಶಾಲೆಗೆ ಬರುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಹಾಗೂ ಶಿಕ್ಷಕರ ತಂಡವು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತಂದಿತು. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಬ್ಯಾಗ್ ಹಾಗೂ ಲೇಖನಿ ಸಾಮಗ್ರಿ ವಿತರಿಸಲಾಯಿತು.</p>.<p>‘ಕೋವಿಡ್ ಸಂದರ್ಭದಲ್ಲಿ ಕೆಲ ಕುಟುಂಬಗಳು ಬೇರೆ ರಾಜ್ಯಗಳಿಗೆ ವಲಸೆ ಹೋಗಿವೆ. ಆ ಕುಟುಂಬಗಳ ಮಕ್ಕಳನ್ನು ಶಾಲೆಯಿಂದ ಹೊರಗುಳಿದ ಮಕ್ಕಳೆಂದು ಗುರುತಿಸಲಾಗಿದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ಕಾರ್ಯವನ್ನು ಚಾಚೂತಪ್ಪದೆ ನಿರ್ವಹಿಸುತ್ತಿದ್ದೇವೆ’ ಶ್ರೀನಿವಾಸನ್ ತಿಳಿಸಿದರು.</p>.<p>‘ಶಾಲಾ ಮುಖ್ಯ ಶಿಕ್ಷಕರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಕ್ಷಣ ಸಂಯೋಜಕರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಬೇಕು. ವಲಸೆ ಹೋದ ಕುಟುಂಬಗಳ ದಾಖಲೆಪತ್ರ ನಿರ್ವಹಣೆ ಮತ್ತು ಆ ಕುಟುಂಬಗಳಲ್ಲಿ ಮಕ್ಕಳಿದ್ದು, ಶಾಲೆಗೆ ಬಾರದಿದ್ದರೆ ಅಂತಹವರನ್ನು ಪತ್ತೆ ಹಚ್ಚಿ ಶಾಲೆಗಳಿಗೆ ದಾಖಲು ಮಾಡಬೇಕೆಂದು ಇಲಾಖೆ ಆದೇಶವಿದೆ’ ಎಂದರು.</p>.<p>ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಪ್ರೀತಿ, ಮುದುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವನಿತಾಕುಮಾರಿ, ಶಿಕ್ಷಕರಾದ ಚಲಪತಿ, ಗಾಯತ್ರಿ, ವರಲಕ್ಷ್ಮಿ, ಸ್ವರ್ಣಲತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>