<p><strong>ಕೋಲಾರ:</strong> ‘ಕೋಲಾರ– ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ 9 ನಿರ್ದೇಶಕರ ಸ್ಥಾನಕ್ಕೆ ಮೇ 13ರಂದು ನಡೆಯುವ ಚುನಾವಣೆಗೆ ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.</p>.<p>ಮತದಾನ ನಡೆಯುವ ಗೋಕುಲ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ಕೊಠಡಿ ಪರಿಶೀಲಿಸಿ ಮಾತನಾಡಿ, ‘ಕೋಚಿಮುಲ್ನ 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಈ ಪೈಕಿ 4 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಕೋಲಾರ ಜಿಲ್ಲೆಯ 5 ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ’ ಎಂದರು.</p>.<p>‘ಮತದಾನಕ್ಕೆ ಕಾಲೇಜಿನ 9 ಕೊಠಡಿ ಆಯ್ಕೆ ಮಾಡಲಾಗಿದೆ. ಅವಳಿ ಜಿಲ್ಲೆಗಳಿಂದ 1,200 ಮತದಾರರು ಮತದಾನ ಮಾಡಲಿದ್ದಾರೆ. ಈಗಾಗಲೇ ಆಯಾ ಗ್ರಾಮೀಣ ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕ ಮಂಡಳಿಯು ನಾಮನಿರ್ದೇಶನ ಮಾಡಿರುವ ಮತದಾರರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ಡೆಲಿಗೇಟ್ ಫಾರಂ, ಗುರುತಿನ ಚೀಟಿ ಹೊಂದಿರುವವರ ಮಾತ್ರ ಮತ ಚಲಾಯಿಸಬಹುದು. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯುತ್ತದೆ. ನಂತರ ಮತ ಎಣಿಕೆ ಮಾಡಿ ಸಂಜೆ 5.-30ಕ್ಕೆ ಫಲಿತಾಂಶ ಘೋಷಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ನಿಷೇಧಾಜ್ಞೆ ಜಾರಿ: ‘ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯುವ ಗೋಕುಲ ಕಾಲೇಜು ಸುತ್ತಮುತ್ತ ಮೇ 13ರಂದು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಫಲಿತಾಂಶ ಘೋಷಣೆ ನಂತರ ವಿಜಯೋತ್ಸವ ಆಚರಿಸುವಂತಿಲ್ಲ’ ಎಂದು ಹೇಳಿದರು.</p>.<p>‘ಚುನಾವಣೆ ಸ್ಥಳದಲ್ಲಿ ಗುಂಪುಗೂಡುವಂತಿಲ್ಲ. ಗೊಂದಲಕ್ಕೆ ಅವಕಾಶ ನೀಡದಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಶಾಂತಿಯುತ ಚುನಾವಣೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಚುನಾವಣೆ ಹಿನ್ನಲೆಯಲ್ಲಿ ಗೋಕುಲ ಕಾಲೇಜು ಪಕ್ಕದ ರಸ್ತೆಯಲ್ಲಿ ಮತದಾನದ ದಿನ ಸಾರ್ವಜನಿಕರ ಓಡಾಟ ಹಾಗೂ ವಾಹನ ಸಂಚಾರ ನಿರ್ಬಂಧಿಸಲಾಗುತ್ತದೆ. ಒಂದು ದಿನದ ಮಟ್ಟಿಗೆ ಸ್ಥಳೀಯರು ಹಾಗೂ ವಾಹನ ಸವಾರರು ಪರ್ಯಾಯ ರಸ್ತೆಯಲ್ಲಿ ಸಂಚರಿಸಬೇಕು’ ಎಂದು ಕೋರಿದರು.</p>.<p><strong>ತಡೆಗೋಡೆ ನಿರ್ಮಾಣ:</strong> ‘ಚುನಾವಣೆ ಶಾಂತಿಯುತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಸುತ್ತ ತಡೆಗೋಡೆ ನಿರ್ಮಿಸಲಾಗುವುದು. ಚುನಾವಣಾ ಪ್ರಕ್ರಿಯೆ ನಿಭಾಯಿಸಲು ಪೊಲೀಸ್ ಇಲಾಖೆಯ ಸಹಕಾರ ಪಡೆಯಲಾಗಿದೆ’ ಎಂದು ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಸೋಮಶೇಖರ್ ತಿಳಿಸಿದರು.</p>.<p><strong>ಪರಿಶೀಲನಾಧಿಕಾರಿ ನೇಮಕ:</strong> ‘ಮತದಾನದ ಅರ್ಹತೆಗಾಗಿ ಎಂಪಿಸಿಎಸ್ಗಳಿಂದ ನಾಮನಿರ್ದೇಶಿತಗೊಂಡ ಮತದಾರರಿಗೆ ನೀಡುವ ಡೆಲಿಗೇಟ್ ಫಾರಂನಲ್ಲಿ ತಪ್ಪಾಗದಂತೆ ಪರೀಶೀಲನೆಗಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಪರಿಶೀಲನಾಧಿಕಾರಿ ನೇಮಿಸಲಾಗಿದೆ’ ಎಂದು ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಸ್ವಾಮಿ ಹೇಳಿದರು.</p>.<p>ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಪಿ.ನಾಗರಾಜ್, ಎಸ್ಐ ಶಂಕರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗರಾಜಗೌಡ, ಕೋಚಿಮುಲ್ ಉಪ ವ್ಯವಸ್ಥಾಪಕರಾದ ನಾಗೇಶ್, ಮಲ್ಲಿಕಾರ್ಜುನ್, ರಮೇಶ್ಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕೋಲಾರ– ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ 9 ನಿರ್ದೇಶಕರ ಸ್ಥಾನಕ್ಕೆ ಮೇ 13ರಂದು ನಡೆಯುವ ಚುನಾವಣೆಗೆ ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.</p>.<p>ಮತದಾನ ನಡೆಯುವ ಗೋಕುಲ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ಕೊಠಡಿ ಪರಿಶೀಲಿಸಿ ಮಾತನಾಡಿ, ‘ಕೋಚಿಮುಲ್ನ 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಈ ಪೈಕಿ 4 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಕೋಲಾರ ಜಿಲ್ಲೆಯ 5 ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ’ ಎಂದರು.</p>.<p>‘ಮತದಾನಕ್ಕೆ ಕಾಲೇಜಿನ 9 ಕೊಠಡಿ ಆಯ್ಕೆ ಮಾಡಲಾಗಿದೆ. ಅವಳಿ ಜಿಲ್ಲೆಗಳಿಂದ 1,200 ಮತದಾರರು ಮತದಾನ ಮಾಡಲಿದ್ದಾರೆ. ಈಗಾಗಲೇ ಆಯಾ ಗ್ರಾಮೀಣ ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕ ಮಂಡಳಿಯು ನಾಮನಿರ್ದೇಶನ ಮಾಡಿರುವ ಮತದಾರರಿಗೆ ಡೆಲಿಗೇಟ್ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದೆ’ ಎಂದು ವಿವರಿಸಿದರು.</p>.<p>‘ಡೆಲಿಗೇಟ್ ಫಾರಂ, ಗುರುತಿನ ಚೀಟಿ ಹೊಂದಿರುವವರ ಮಾತ್ರ ಮತ ಚಲಾಯಿಸಬಹುದು. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯುತ್ತದೆ. ನಂತರ ಮತ ಎಣಿಕೆ ಮಾಡಿ ಸಂಜೆ 5.-30ಕ್ಕೆ ಫಲಿತಾಂಶ ಘೋಷಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ನಿಷೇಧಾಜ್ಞೆ ಜಾರಿ: ‘ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯುವ ಗೋಕುಲ ಕಾಲೇಜು ಸುತ್ತಮುತ್ತ ಮೇ 13ರಂದು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಫಲಿತಾಂಶ ಘೋಷಣೆ ನಂತರ ವಿಜಯೋತ್ಸವ ಆಚರಿಸುವಂತಿಲ್ಲ’ ಎಂದು ಹೇಳಿದರು.</p>.<p>‘ಚುನಾವಣೆ ಸ್ಥಳದಲ್ಲಿ ಗುಂಪುಗೂಡುವಂತಿಲ್ಲ. ಗೊಂದಲಕ್ಕೆ ಅವಕಾಶ ನೀಡದಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಶಾಂತಿಯುತ ಚುನಾವಣೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಚುನಾವಣೆ ಹಿನ್ನಲೆಯಲ್ಲಿ ಗೋಕುಲ ಕಾಲೇಜು ಪಕ್ಕದ ರಸ್ತೆಯಲ್ಲಿ ಮತದಾನದ ದಿನ ಸಾರ್ವಜನಿಕರ ಓಡಾಟ ಹಾಗೂ ವಾಹನ ಸಂಚಾರ ನಿರ್ಬಂಧಿಸಲಾಗುತ್ತದೆ. ಒಂದು ದಿನದ ಮಟ್ಟಿಗೆ ಸ್ಥಳೀಯರು ಹಾಗೂ ವಾಹನ ಸವಾರರು ಪರ್ಯಾಯ ರಸ್ತೆಯಲ್ಲಿ ಸಂಚರಿಸಬೇಕು’ ಎಂದು ಕೋರಿದರು.</p>.<p><strong>ತಡೆಗೋಡೆ ನಿರ್ಮಾಣ:</strong> ‘ಚುನಾವಣೆ ಶಾಂತಿಯುತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಸುತ್ತ ತಡೆಗೋಡೆ ನಿರ್ಮಿಸಲಾಗುವುದು. ಚುನಾವಣಾ ಪ್ರಕ್ರಿಯೆ ನಿಭಾಯಿಸಲು ಪೊಲೀಸ್ ಇಲಾಖೆಯ ಸಹಕಾರ ಪಡೆಯಲಾಗಿದೆ’ ಎಂದು ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಸೋಮಶೇಖರ್ ತಿಳಿಸಿದರು.</p>.<p><strong>ಪರಿಶೀಲನಾಧಿಕಾರಿ ನೇಮಕ:</strong> ‘ಮತದಾನದ ಅರ್ಹತೆಗಾಗಿ ಎಂಪಿಸಿಎಸ್ಗಳಿಂದ ನಾಮನಿರ್ದೇಶಿತಗೊಂಡ ಮತದಾರರಿಗೆ ನೀಡುವ ಡೆಲಿಗೇಟ್ ಫಾರಂನಲ್ಲಿ ತಪ್ಪಾಗದಂತೆ ಪರೀಶೀಲನೆಗಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಪರಿಶೀಲನಾಧಿಕಾರಿ ನೇಮಿಸಲಾಗಿದೆ’ ಎಂದು ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಸ್ವಾಮಿ ಹೇಳಿದರು.</p>.<p>ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಪಿ.ನಾಗರಾಜ್, ಎಸ್ಐ ಶಂಕರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗರಾಜಗೌಡ, ಕೋಚಿಮುಲ್ ಉಪ ವ್ಯವಸ್ಥಾಪಕರಾದ ನಾಗೇಶ್, ಮಲ್ಲಿಕಾರ್ಜುನ್, ರಮೇಶ್ಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>