‘ದೇಶದ ಜನರು ಸಮೃದ್ಧಿ ಮತ್ತು ಸಾಧನಗಳ ವೈಭವಯುತ ಇತಿಹಾಸ ಸಂಕ್ರಮಿಸುವ ಹಾಗೂ ಸ್ಮರಿಸುವ ಉದ್ದೇಶದಿಂದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಕರು, ರೈತರು, ಸೈನಿಕರ ಸೇವೆ ಶ್ಲಾಘನೀಯ. ಹೋರಾಟಗಾರರ ತ್ಯಾಗ ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ದೇಶವನ್ನು ಸಾರ್ವಭೌಮ ರಾಷ್ಟ್ರವಾಗಿಸುವ ಜವಾಬ್ದಾರಿ ಪ್ರತಿ ಭಾರತೀಯರ ಮೇಲಿದೆ’ ಎಂದು ಕಿವಿಮಾತು ಹೇಳಿದರು.