ಬುಧವಾರ ಪ್ರಜಾವಾಣಿಯಲ್ಲಿ ‘ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸುದ್ದಿಗೆ ಸ್ಪಂದಿಸಿದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಸರ್ವೇಶ್ ಅವರು ನೀರು ಸರಬರಾಜು ಇಲಾಖೆಯ ಎಂಜಿನಿಯರ್ ರಾಜೇಶ್ ಅವರಿಗೆ ಸೂಚನೆ ನೀಡಿದ್ದು, ಆದೇಶದ ಮೇರೆಗೆ ರಾಜೇಶ್ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಘಟಕ ದುರಸ್ತಿಗೊಳಿಸಿದ್ದು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ದೊರೆಯುವಂತೆ ಮಾಡಿದ್ದಾರೆ.