ಟಿ.ಚನ್ನಯ್ಯ ರಂಗಮಂದಿರ ರಸ್ತೆ, ಕಾಳಿಕಾಂಬ ರಸ್ತೆ, ಎಂ.ಬಿ ರಸ್ತೆ, ಶಾರದಾ ಚಿತ್ರಮಂದಿರ ರಸ್ತೆ ಅವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ನಗರಸಭೆ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.