‘ಪುನರ್ವಸತಿ ಕೇಂದ್ರದ 2,3,4ರ ಘಟಕದ ಕೊಳವೆಬಾವಿಯಲ್ಲಿ ಅಂತರ್ಜಲ ಇಲ್ಲ. ಆದ್ದರಿಂದ ಇಲ್ಲಿ ತಲಾ 3 ಸಾವಿರ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಪ್ಲಾಸ್ಟಿಕ್ ಕಂಟೇನರ್ ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಬ್ಲಾಕ್ 5ರಲ್ಲಿ ಕೊಳವೆಬಾವಿ ಪಂಪ್ ಸೆಟ್ ದುರಸ್ತಿಗೊಳಿಸಿ ನೀರು ಸರಬರಾಜು ಮಾಡಲಾಗುವುದು’ ಎಂದು ಭರವಸೆ ನೀಡಿದರು. ‘ಅಧಿಕಾರಿಗಳು ಭೇಟಿ ನೀಡಿ ಎರಡು ದಿನದಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು’ ಎಂದು ಆದಿವಾಸಿ ವ್ಯವಸಾಯ ಆಂದೋಲನ ಸಮಿತಿ ಸಂಚಾಲಕ ಎಂ.ಬಿ.ಪ್ರಭು ತಿಳಿಸಿದರು.