<p><strong>ಮುಳಬಾಗಿಲು:</strong> ಶಿಕ್ಷಕರು ಗ್ರಾಮೀಣ ಭಾಗದ ಶಾಲೆಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೇ ಅನನುಕೂಲವಾಗಿದೆ. ಕೂಡಲೇ, ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನಗರದ ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ದಯಾನಂದ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಎಚ್. ವೆಂಕಟಗಿರಿಯಪ್ಪ ಮಾತನಾಡಿ ಗಡಿ ಪ್ರದೇಶಗಳಾದ ಬ್ಯಾಡರಹಳ್ಳಿ, ಹೊನ್ನಿಕೆರೆ, ಸುಣ್ಣಪಕುಂಟೆ ನಾಚಹಳ್ಳಿ, ಪುಲಿಪಾಪೇನಹಳ್ಳಿ, ಅಂಕಿ ರೆಡ್ಡಿ ಹೊಸಹಳ್ಳಿ, ತಾತಿಗಟ್ಟ, ಅಂಬ್ಲಿಕಲ್, ಹೆಬ್ಬಣಿ ಕಡೆಗೆ ಶಿಕ್ಷಕಿ ಯರು ಹೋಗಿಬರಲು ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ಮನವಿ ಸ್ವೀಕರಿಸಿದ ಡಿಪೊ ಮ್ಯಾನೇಜರ್ ದಯಾನಂದ್ ಮಾತ ನಾಡಿ, ಶಿಕ್ಷಣದಿಂದ ವಿದ್ಯಾರ್ಥಿಗಳು ಉತ್ತಮ ಮೌಲ್ಯ ರೂಪಿಸಿಕೊಳ್ಳಲು ಸಾಧ್ಯ. ಇಂತಹ ಸಂದರ್ಭದಲ್ಲಿ ಶಿಕ್ಷಕರು ತೆರಳಲು ಅನನುಕೂಲವಾಗಿರುವ ಮಾರ್ಗಗಳ ಬಗ್ಗೆ ನನಗೆ ಮಾಹಿತಿ ಕೊಟ್ಟರೆ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಶಿಕ್ಷಕರು ಗ್ರಾಮೀಣ ಭಾಗದ ಶಾಲೆಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೇ ಅನನುಕೂಲವಾಗಿದೆ. ಕೂಡಲೇ, ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನಗರದ ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ದಯಾನಂದ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಎಚ್. ವೆಂಕಟಗಿರಿಯಪ್ಪ ಮಾತನಾಡಿ ಗಡಿ ಪ್ರದೇಶಗಳಾದ ಬ್ಯಾಡರಹಳ್ಳಿ, ಹೊನ್ನಿಕೆರೆ, ಸುಣ್ಣಪಕುಂಟೆ ನಾಚಹಳ್ಳಿ, ಪುಲಿಪಾಪೇನಹಳ್ಳಿ, ಅಂಕಿ ರೆಡ್ಡಿ ಹೊಸಹಳ್ಳಿ, ತಾತಿಗಟ್ಟ, ಅಂಬ್ಲಿಕಲ್, ಹೆಬ್ಬಣಿ ಕಡೆಗೆ ಶಿಕ್ಷಕಿ ಯರು ಹೋಗಿಬರಲು ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಹೇಳಿದರು.</p>.<p>ಮನವಿ ಸ್ವೀಕರಿಸಿದ ಡಿಪೊ ಮ್ಯಾನೇಜರ್ ದಯಾನಂದ್ ಮಾತ ನಾಡಿ, ಶಿಕ್ಷಣದಿಂದ ವಿದ್ಯಾರ್ಥಿಗಳು ಉತ್ತಮ ಮೌಲ್ಯ ರೂಪಿಸಿಕೊಳ್ಳಲು ಸಾಧ್ಯ. ಇಂತಹ ಸಂದರ್ಭದಲ್ಲಿ ಶಿಕ್ಷಕರು ತೆರಳಲು ಅನನುಕೂಲವಾಗಿರುವ ಮಾರ್ಗಗಳ ಬಗ್ಗೆ ನನಗೆ ಮಾಹಿತಿ ಕೊಟ್ಟರೆ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>