<p><strong>ಕೋಲಾರ:</strong> ಮಾಲೂರು ತಾಲ್ಲೂಕಿನ ಕೆ.ಜಿ ಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಟೇಕಲ್ ಹೋಬಳಿ ಘಟಕದ ಸದಸ್ಯರು ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕೋಲಾರ, ಮಾಲೂರು, ಬಂಗಾರಪೇಟೆ ಮತ್ತು ಮಾಸ್ತಿ ಮುಖ್ಯ ರಸ್ತೆ ಮಧ್ಯೆ ಹಳಿ ಹಾದು ಹೋಗಿದೆ. ಈ ಭಾಗದಲ್ಲಿ ರೈಲ್ವೆ ಗೇಟ್ ನಿರ್ಮಿಸಲಾಗಿದ್ದು, ಬೆಂಗಳೂರು ಮತ್ತು ಚೆನ್ನೈ ನಡುವೆ ಅರ್ಧ ತಾಸಿಗೊಂದು ರೈಲು ಸಂಚರಿಸುತ್ತವೆ. ಪ್ರತಿ ಬಾರಿ ರೈಲು ಬಂದಾಗ ಗೇಟ್ ಹಾಕುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ’ ಎಂದು ಸಂಘಟನೆ ಸದಸ್ಯರು ಅಳಲು ತೋಡಿಕೊಂಡರು.</p>.<p>‘ಪ್ರತಿ ಬಾರಿ ರೈಲ್ವೆ ಗೇಟ್ ಹಾಕಿದಾಗ ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ಆಂಬುಲೆನ್ಸ್ಗಳು ವಾಹನ ದಟ್ಟಣೆಯಲ್ಲಿ ಸಿಲುಕಿ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ರೈಲ್ವೆ ಮೇಲ್ಸೇತುವೆಗೆ ಈ ಹಿಂದೆಯೇ ಅನುದಾನ ಬಿಡುಗಡೆಯಾಗಿದೆ. ಆದರೂ ಮೇಲ್ಸೇತುವೆ ನಿರ್ಮಾಣ ಮಾಡಿಲ್ಲ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಜೆ.ಎಚ್.ಶ್ರೀನಾಥ್ ದೂರಿದರು.</p>.<p>‘ಬಂಗಾರಪೇಟೆ, ಮಾಲೂರು, ಮಾಸ್ತಿ ಹಾಗೂ ಕೋಲಾರಕ್ಕೆ ಹೋಗುವ ವಾಹನಗಳು ರೈಲ್ವೆ ಗೇಟ್ ಮೂಲಕವೇ ಸಂಚರಿಸಬೇಕು. ಹೀಗಾಗಿ ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿವೆ. ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಸ್ವಾಧೀನಕ್ಕಾಗಿ ರೈತರಿಗೆ ಈಗಾಗಲೇ ಭೂಪರಿಹಾರ ನೀಡಲಾಗಿದೆ. ಆದರೆ, ಕಾಮಗಾರಿ ಮಾತ್ರ ಆರಂಭಿಸಿಲ್ಲ. ಅಧಿಕಾರಿಗಳಿಗೆ ಸಮಸ್ಯೆಯ ಅರಿವಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ವಾಹನ ದಟ್ಟಣೆ ತಪ್ಪಿಸಲು ಮತ್ತು ಸ್ಥಳೀಯರ ಅನುಕೂಲಕ್ಕೆ ರೈಲ್ವೆ ಮೇಲ್ಸೇತುವೆ ಅತ್ಯಗತ್ಯವಾಗಿದೆ. ಹೀಗಾಗಿ ಶೀಘ್ರವೇ ಮೇಲ್ಸೇತುವೆ ನಿರ್ಮಿಸಿ ಸಂಚಾರ ಸಮಸ್ಯೆಗೆ ಮುಕ್ತಿ ನೀಡಬೇಕು’ ಎಂದು ಸಂಘಟನೆ ಸದಸ್ಯರು ಕೋರಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಾಮೇಗೌಡ, ಕಾರ್ಯದರ್ಶಿ ಗೋವಿಂದಪ್ಪ, ಮಾಲೂರು ತಾಲ್ಲೂಕು ಘಟಕದ ಉಪಾಧ್ಯಕ್ಷ ಕೆ.ಎಂ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ಉಪಾಧ್ಯಕ್ಷ ರಾಮಚಂದ್ರ, ಟೇಕಲ್ ಹೋಬಳಿ ಘಟಕದ ಅಧ್ಯಕ್ಷ ಎನ್.ವಿನೋದ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮಾಲೂರು ತಾಲ್ಲೂಕಿನ ಕೆ.ಜಿ ಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಟೇಕಲ್ ಹೋಬಳಿ ಘಟಕದ ಸದಸ್ಯರು ಇಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕೋಲಾರ, ಮಾಲೂರು, ಬಂಗಾರಪೇಟೆ ಮತ್ತು ಮಾಸ್ತಿ ಮುಖ್ಯ ರಸ್ತೆ ಮಧ್ಯೆ ಹಳಿ ಹಾದು ಹೋಗಿದೆ. ಈ ಭಾಗದಲ್ಲಿ ರೈಲ್ವೆ ಗೇಟ್ ನಿರ್ಮಿಸಲಾಗಿದ್ದು, ಬೆಂಗಳೂರು ಮತ್ತು ಚೆನ್ನೈ ನಡುವೆ ಅರ್ಧ ತಾಸಿಗೊಂದು ರೈಲು ಸಂಚರಿಸುತ್ತವೆ. ಪ್ರತಿ ಬಾರಿ ರೈಲು ಬಂದಾಗ ಗೇಟ್ ಹಾಕುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ’ ಎಂದು ಸಂಘಟನೆ ಸದಸ್ಯರು ಅಳಲು ತೋಡಿಕೊಂಡರು.</p>.<p>‘ಪ್ರತಿ ಬಾರಿ ರೈಲ್ವೆ ಗೇಟ್ ಹಾಕಿದಾಗ ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ಆಂಬುಲೆನ್ಸ್ಗಳು ವಾಹನ ದಟ್ಟಣೆಯಲ್ಲಿ ಸಿಲುಕಿ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ರೈಲ್ವೆ ಮೇಲ್ಸೇತುವೆಗೆ ಈ ಹಿಂದೆಯೇ ಅನುದಾನ ಬಿಡುಗಡೆಯಾಗಿದೆ. ಆದರೂ ಮೇಲ್ಸೇತುವೆ ನಿರ್ಮಾಣ ಮಾಡಿಲ್ಲ’ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಜೆ.ಎಚ್.ಶ್ರೀನಾಥ್ ದೂರಿದರು.</p>.<p>‘ಬಂಗಾರಪೇಟೆ, ಮಾಲೂರು, ಮಾಸ್ತಿ ಹಾಗೂ ಕೋಲಾರಕ್ಕೆ ಹೋಗುವ ವಾಹನಗಳು ರೈಲ್ವೆ ಗೇಟ್ ಮೂಲಕವೇ ಸಂಚರಿಸಬೇಕು. ಹೀಗಾಗಿ ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿವೆ. ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಸ್ವಾಧೀನಕ್ಕಾಗಿ ರೈತರಿಗೆ ಈಗಾಗಲೇ ಭೂಪರಿಹಾರ ನೀಡಲಾಗಿದೆ. ಆದರೆ, ಕಾಮಗಾರಿ ಮಾತ್ರ ಆರಂಭಿಸಿಲ್ಲ. ಅಧಿಕಾರಿಗಳಿಗೆ ಸಮಸ್ಯೆಯ ಅರಿವಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ವಾಹನ ದಟ್ಟಣೆ ತಪ್ಪಿಸಲು ಮತ್ತು ಸ್ಥಳೀಯರ ಅನುಕೂಲಕ್ಕೆ ರೈಲ್ವೆ ಮೇಲ್ಸೇತುವೆ ಅತ್ಯಗತ್ಯವಾಗಿದೆ. ಹೀಗಾಗಿ ಶೀಘ್ರವೇ ಮೇಲ್ಸೇತುವೆ ನಿರ್ಮಿಸಿ ಸಂಚಾರ ಸಮಸ್ಯೆಗೆ ಮುಕ್ತಿ ನೀಡಬೇಕು’ ಎಂದು ಸಂಘಟನೆ ಸದಸ್ಯರು ಕೋರಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಾಮೇಗೌಡ, ಕಾರ್ಯದರ್ಶಿ ಗೋವಿಂದಪ್ಪ, ಮಾಲೂರು ತಾಲ್ಲೂಕು ಘಟಕದ ಉಪಾಧ್ಯಕ್ಷ ಕೆ.ಎಂ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ಉಪಾಧ್ಯಕ್ಷ ರಾಮಚಂದ್ರ, ಟೇಕಲ್ ಹೋಬಳಿ ಘಟಕದ ಅಧ್ಯಕ್ಷ ಎನ್.ವಿನೋದ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>