<p><strong>ಕೋಲಾರ:</strong> ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಆರೋಗ್ಯದ ದೃಷ್ಟಿಯಿಂದ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿಪಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆತಂಕಕಾರಿಯಾಗಿದೆ. ಹೀಗಾಗಿ ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಿಗೆ ಬರಲು ಸಮಯ ನಿಗದಿಪಡಿಸಬೇಕು. ನೌಕರರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು’ ಎಂದು ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿ ಮಾಡಿದರು.</p>.<p>‘ನೌಕರರು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಕುಟುಂಬ ವರ್ಗದಲ್ಲಿ ಕೊರೊನಾ ಸೋಂಕಿನ ತೀವ್ರತೆ ಬಗ್ಗೆ ಆತಂಕವಿದೆ. ಸೋಂಕು ತಡೆಗಾಗಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿಪಡಿಸಬೇಕು’ ಎಂದು ಕೋರಿದರು.</p>.<p>‘ಕೋವಿಡ್ ಸೋಂಕಿನಿಂದ ವಿದ್ಯಾರ್ಥಿಗಳ ರಕ್ಷಣೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಶೀಘ್ರವೇ ಬೇಸಿಗೆ ರಜೆ ನೀಡಬೇಕು. ಈಗಾಗಲೇ 1ನೇ ತರಗತಿಯಿಂದ 9ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಲೆ ನಡೆಯುತ್ತಿದ್ದು, ಪೋಷಕರು ಸೋಂಕು ಹರುಡುವ ಭೀತಿಯಲ್ಲಿದ್ದಾರೆ’ ಎಂದು ಹೇಳಿದರು.</p>.<p>‘ಪ್ರತಿ ವರ್ಷದಂತೆ ಏ.10ರಿಂದ ಮೇ 30ರವರೆಗೆ ಬೇಸಿಗೆ ರಜೆ ನೀಡುವ ಆದೇಶ ಜಾರಿ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ನಿರಂತರ, ವ್ಯಾಪಕ ಮೌಲ್ಯಮಾಪನ ಪದ್ಧತಿ ಇರುವುದರಿಂದ ಅದನ್ನೇ ಮಕ್ಕಳ ಉತ್ತೀರ್ಣಕ್ಕೆ ಪರಿಗಣಿಸಿ ರಜೆ ನೀಡಬೇಕು’ ಎಂದು ತಿಳಿಸಿದರು.</p>.<p><strong>ದೂರಿಗೆ ಹೆದರಿದಿರಿ:</strong> ‘ಅನಾಮಧೇಯ ದೂರುಗಳಿಗೆ ಹೆದರದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ. ಅಂತಹ ದೂರುಗಳಿಗೆ ಸ್ಪಂದಿಸದಿರಲು ಈಗಾಗಲೇ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನೌಕರರ ಸಂಘದ ಮನವಿಯಂತೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಅಂಗವಿಕಲ ನೌಕರರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಸಂಘದ ಖಜಾಂಚಿ ಕೆ.ವಿಜಯ್, ಗೌರವಾಧ್ಯಕ್ಷ ಶ್ರೀನಿವಾಸರೆಡ್ಡಿ, ಜಂಟಿ ಕಾರ್ಯದರ್ಶಿ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಗೌತಮ್, ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಅಜಯ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಆರೋಗ್ಯದ ದೃಷ್ಟಿಯಿಂದ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿಪಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆತಂಕಕಾರಿಯಾಗಿದೆ. ಹೀಗಾಗಿ ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಿಗೆ ಬರಲು ಸಮಯ ನಿಗದಿಪಡಿಸಬೇಕು. ನೌಕರರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು’ ಎಂದು ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿ ಮಾಡಿದರು.</p>.<p>‘ನೌಕರರು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಕುಟುಂಬ ವರ್ಗದಲ್ಲಿ ಕೊರೊನಾ ಸೋಂಕಿನ ತೀವ್ರತೆ ಬಗ್ಗೆ ಆತಂಕವಿದೆ. ಸೋಂಕು ತಡೆಗಾಗಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿಪಡಿಸಬೇಕು’ ಎಂದು ಕೋರಿದರು.</p>.<p>‘ಕೋವಿಡ್ ಸೋಂಕಿನಿಂದ ವಿದ್ಯಾರ್ಥಿಗಳ ರಕ್ಷಣೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಶೀಘ್ರವೇ ಬೇಸಿಗೆ ರಜೆ ನೀಡಬೇಕು. ಈಗಾಗಲೇ 1ನೇ ತರಗತಿಯಿಂದ 9ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಲೆ ನಡೆಯುತ್ತಿದ್ದು, ಪೋಷಕರು ಸೋಂಕು ಹರುಡುವ ಭೀತಿಯಲ್ಲಿದ್ದಾರೆ’ ಎಂದು ಹೇಳಿದರು.</p>.<p>‘ಪ್ರತಿ ವರ್ಷದಂತೆ ಏ.10ರಿಂದ ಮೇ 30ರವರೆಗೆ ಬೇಸಿಗೆ ರಜೆ ನೀಡುವ ಆದೇಶ ಜಾರಿ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ನಿರಂತರ, ವ್ಯಾಪಕ ಮೌಲ್ಯಮಾಪನ ಪದ್ಧತಿ ಇರುವುದರಿಂದ ಅದನ್ನೇ ಮಕ್ಕಳ ಉತ್ತೀರ್ಣಕ್ಕೆ ಪರಿಗಣಿಸಿ ರಜೆ ನೀಡಬೇಕು’ ಎಂದು ತಿಳಿಸಿದರು.</p>.<p><strong>ದೂರಿಗೆ ಹೆದರಿದಿರಿ:</strong> ‘ಅನಾಮಧೇಯ ದೂರುಗಳಿಗೆ ಹೆದರದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ. ಅಂತಹ ದೂರುಗಳಿಗೆ ಸ್ಪಂದಿಸದಿರಲು ಈಗಾಗಲೇ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನೌಕರರ ಸಂಘದ ಮನವಿಯಂತೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಅಂಗವಿಕಲ ನೌಕರರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಸಂಘದ ಖಜಾಂಚಿ ಕೆ.ವಿಜಯ್, ಗೌರವಾಧ್ಯಕ್ಷ ಶ್ರೀನಿವಾಸರೆಡ್ಡಿ, ಜಂಟಿ ಕಾರ್ಯದರ್ಶಿ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಗೌತಮ್, ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಅಜಯ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>