ಬಂಗಾರಪೇಟೆ: ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಾದ್ಯಂತ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿದೆ. ಕೃಷಿ ಬೆಳೆಗೆ ಎಕರೆಗೆಕನಿಷ್ಠ ₹1 ಲಕ್ಷ, ತೋಟಗಾರಿಕೆ, ವಾಣಿಜ್ಯ ಬೆಳೆಗೆ ಎಕರೆಗೆ ₹1.5 ಲಕ್ಷ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಸತತ ಮಳೆಯಿಂದಾಗಿ ಅದೆಲ್ಲಾ ಸಂಪೂರ್ಣ ನಾಶವಾಗಿದೆ ಎಂದರು.
ಅಲ್ಲದೆ ತಾಲ್ಲೂಕಿನಾದ್ಯಂತ ನೂರಾರು ಮನೆಗಳು ಕುಸಿದಿವೆ. ಜಾನುವಾರು ಕೂಡ ಮಳೆಗೆ ತತ್ತರಿಸಿದೆ. ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಕನಿಷ್ಠ ₹2 ಲಕ್ಷ ನೀಡುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಅವರು ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಶ್ರೀನಿವಾಸಗೌಡರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಐತಾಂಡಹಳ್ಳಿ ಅಮರೇಶ, ಬಾವರಹಳ್ಳಿ ಅತಿತ್ರೆಹಮಾನ್, ಸೊಣ್ಣೇಗೌಡ, ಕಾರಹಳ್ಳಿ ಮಂಜುನಾಥ, ಅವೀನ್, ಹರೀಶ ಇದ್ದರು.