<p>ಬಂಗಾರಪೇಟೆ: ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನಾದ್ಯಂತ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿದೆ. ಕೃಷಿ ಬೆಳೆಗೆ ಎಕರೆಗೆಕನಿಷ್ಠ ₹1 ಲಕ್ಷ, ತೋಟಗಾರಿಕೆ, ವಾಣಿಜ್ಯ ಬೆಳೆಗೆ ಎಕರೆಗೆ ₹1.5 ಲಕ್ಷ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಸತತ ಮಳೆಯಿಂದಾಗಿ ಅದೆಲ್ಲಾ ಸಂಪೂರ್ಣ ನಾಶವಾಗಿದೆ ಎಂದರು.</p>.<p>ಅಲ್ಲದೆ ತಾಲ್ಲೂಕಿನಾದ್ಯಂತ ನೂರಾರು ಮನೆಗಳು ಕುಸಿದಿವೆ. ಜಾನುವಾರು ಕೂಡ ಮಳೆಗೆ ತತ್ತರಿಸಿದೆ. ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಕನಿಷ್ಠ ₹2 ಲಕ್ಷ ನೀಡುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಅವರು ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಶ್ರೀನಿವಾಸಗೌಡರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ಐತಾಂಡಹಳ್ಳಿ ಅಮರೇಶ, ಬಾವರಹಳ್ಳಿ ಅತಿತ್ರೆಹಮಾನ್, ಸೊಣ್ಣೇಗೌಡ, ಕಾರಹಳ್ಳಿ ಮಂಜುನಾಥ, ಅವೀನ್, ಹರೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನಾದ್ಯಂತ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿದೆ. ಕೃಷಿ ಬೆಳೆಗೆ ಎಕರೆಗೆಕನಿಷ್ಠ ₹1 ಲಕ್ಷ, ತೋಟಗಾರಿಕೆ, ವಾಣಿಜ್ಯ ಬೆಳೆಗೆ ಎಕರೆಗೆ ₹1.5 ಲಕ್ಷ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಸತತ ಮಳೆಯಿಂದಾಗಿ ಅದೆಲ್ಲಾ ಸಂಪೂರ್ಣ ನಾಶವಾಗಿದೆ ಎಂದರು.</p>.<p>ಅಲ್ಲದೆ ತಾಲ್ಲೂಕಿನಾದ್ಯಂತ ನೂರಾರು ಮನೆಗಳು ಕುಸಿದಿವೆ. ಜಾನುವಾರು ಕೂಡ ಮಳೆಗೆ ತತ್ತರಿಸಿದೆ. ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಕನಿಷ್ಠ ₹2 ಲಕ್ಷ ನೀಡುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಅವರು ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಶ್ರೀನಿವಾಸಗೌಡರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.</p>.<p>ಐತಾಂಡಹಳ್ಳಿ ಅಮರೇಶ, ಬಾವರಹಳ್ಳಿ ಅತಿತ್ರೆಹಮಾನ್, ಸೊಣ್ಣೇಗೌಡ, ಕಾರಹಳ್ಳಿ ಮಂಜುನಾಥ, ಅವೀನ್, ಹರೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>