<p><strong>ಬಂಗಾರಪೇಟೆ:</strong> ಸರ್ಕಾರ ಅನುಷ್ಠಾನ ಮಾಡುವ ಎಲ್ಲ ಮೋಜಿನಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದರೂ ಇಲ್ಲಿವರಗೆ ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ನೀಡಿದೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ತಾಲ್ಲೂಕು ಅಧ್ಯಕ್ಷ ಪಾಂಡುರಂಗಯ್ಯ ತಿಳಿಸಿದರು.</p>.<p>ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ತಾಲ್ಲೂಕು ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.</p>.<p>ಸುಮಾರು 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದರೂ ಇಲಾಖೆಯಿಂದ ಯಾವುದೇ ಸೌಲಭ್ಯ ಇಲ್ಲ. ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ಪರವಾನಗಿ ಭೂಮಾಪಕರಿಗೆ ನೀಡಿದೆ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರದಿಂದ ಯಾವುದೇ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಇಲಾಖೆ ನೀಡುತ್ತಿರುವ ಸಂಭಾವಯಿಂದ ಜೀವನ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಕೆಲಸ ಕಾಯಂಗೊಳಿಸಿ ಸರ್ಕಾರಿ ಭೂಮಾಪಕರನ್ನಾಗಿ ಮಾಡಬೇಕಾಗಿ ಶಾಸಕರಲ್ಲಿ ಮನವಿ ಮಾಡಿದರು.</p>.<p>ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ರವಿ ರಾಜು, ನಿತಿನ್ ಪ್ರಭಾಕರ್, ಅಜಯ್ ಕುಮಾರ್, ರಕ್ಷಿತ್ , ಸಂತೋಷ್ ಪಿ.ಎನ್, ವೆಂಕಟೇಶ್, ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಸರ್ಕಾರ ಅನುಷ್ಠಾನ ಮಾಡುವ ಎಲ್ಲ ಮೋಜಿನಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದರೂ ಇಲ್ಲಿವರಗೆ ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ನೀಡಿದೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ತಾಲ್ಲೂಕು ಅಧ್ಯಕ್ಷ ಪಾಂಡುರಂಗಯ್ಯ ತಿಳಿಸಿದರು.</p>.<p>ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ತಾಲ್ಲೂಕು ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.</p>.<p>ಸುಮಾರು 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದರೂ ಇಲಾಖೆಯಿಂದ ಯಾವುದೇ ಸೌಲಭ್ಯ ಇಲ್ಲ. ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ಪರವಾನಗಿ ಭೂಮಾಪಕರಿಗೆ ನೀಡಿದೆ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರದಿಂದ ಯಾವುದೇ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಇಲಾಖೆ ನೀಡುತ್ತಿರುವ ಸಂಭಾವಯಿಂದ ಜೀವನ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಕೆಲಸ ಕಾಯಂಗೊಳಿಸಿ ಸರ್ಕಾರಿ ಭೂಮಾಪಕರನ್ನಾಗಿ ಮಾಡಬೇಕಾಗಿ ಶಾಸಕರಲ್ಲಿ ಮನವಿ ಮಾಡಿದರು.</p>.<p>ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ರವಿ ರಾಜು, ನಿತಿನ್ ಪ್ರಭಾಕರ್, ಅಜಯ್ ಕುಮಾರ್, ರಕ್ಷಿತ್ , ಸಂತೋಷ್ ಪಿ.ಎನ್, ವೆಂಕಟೇಶ್, ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>